5:48 PM Wednesday26 - February 2025
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮ: ಕಪಿಲೆಯಲ್ಲಿ ಮಿಂದ ಭಕ್ತ… ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮೇಳ: ಸಿದ್ಧತಾ ಕಾರ್ಯ ಪರಿಶೀಲಿಸಿದ ಸ್ಪೀಕರ್ ಖಾದರ್ Forest Fire | ಚಿಕ್ಕಮಗಳೂರು: ದೇವರು ಮನೆಗುಡ್ಡದಲ್ಲಿ ಕಾಡ್ಗಿಚ್ಚು; ಅರಣ್ಯ ಇಲಾಖೆ ಪರಿಶ್ರಮದಿಂದ… Pocso | ಬೆಂಗಳೂರು: ನಿರಂತರ ಅತ್ಯಾಚಾರಕ್ಕೊಳಗಾದ ಬಾಲಕಿಯ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ನಿಂದ… Exams | ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ… ಐಎಂಎ ಹಗರಣ: ರಂಜಾನ್ ಹಬ್ಬಕ್ಕೂ ಮುನ್ನ ಹಣ ಕಳೆದುಕೊಂಡವರಿಗೆ ಹರಿಹಾರ: ಸಚಿವ ಕೃಷ್ಣ… Basavanna | ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ… Sub Jail | ಮಂಗಳೂರು ಜೈಲ್ ಒಳಗೆ 2 ಪೊಟ್ಟಣ ಎಸೆತ: ಮಾಜಿ… ಸುಗ್ರಿವಾಜ್ಞೆ ಜಾರಿಯಾದರೂ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಗೃಹ ಸಚಿವರ ತವರಿನಲ್ಲೇ ಇಬ್ಬರು… ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್…

ಇತ್ತೀಚಿನ ಸುದ್ದಿ

Grants | ತೀರ್ಥಹಳ್ಳಿ ಅಭಿವೃದ್ಧಿ ಕಾಮಗಾರಿಗೆ ಅನುದಾನ: ಸಚಿವ ಜಮೀರ್ ಗೆ ಪಟ್ಟಣ ಪಂಚಾಯತ್ ಅಧ್ಯಕ್ಷ ಅಸಾದಿ ಮನವಿ

25/02/2025, 22:10

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಹಲವು ಪ್ರದೇಶಗಳಲ್ಲಿ ರಾಜ ಕಾಲುವೆ, ಒಳ ಚರಂಡಿ ವ್ಯವಸ್ಥೆ, ಮೂಲಭೂತ ಸೌಕರ್ಯವಿಲ್ಲದೆ ಜನರಿಗೆ ತೊಂದರೆಯಾಗುತ್ತಿದ್ದು ಈ ಕಾರಣದಿಂದ ತೀರ್ಥಹಳ್ಳಿ ಅಭಿವೃದ್ಧಿ ಕಾಮಗಾರಿಗೆ ಅನುದಾನ ಕೊಡಿಸಬೇಕೆಂದು ವಸತಿ, ವಖ್ಫ್, ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರಿಗೆ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಹಮತ್ ಉಲ್ಲಾ ಅಸಾದಿ ಮನವಿ ಸಲ್ಲಿಸಿದರು.
ಪಟ್ಟಣದ ಸುಮಾರು 6 ರಿಂದ 7 ವಾರ್ಡ್ಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಒಳಚರಂಡಿ ವ್ಯವಸ್ಥೆ,ಇನ್ನು ಬುಕ್ಲಾಪುರದಲ್ಲಿ ಅಲೆಮಾರಿ ಜನಾಂಗದವರ 23 ಕುಟುಂಬಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಜಿಲ್ಲಾಧಿಕಾರಿಗಳು ಜಾಗ ಮಂಜೂರು ಮಾಡಿದ್ದೂ ಅಲ್ಲಿ ಚರಂಡಿ ವ್ಯವಸ್ಥೆ, ರಸ್ತೆ ಕಾಮಗಾರಿ, ಶೌಚಾಲಯ ನಿರ್ಮಾಣ, ವಿದ್ಯುತ್ಕರಣ ಹೀಗೆ ಹಲವು ಕಾಮಗಾರಿಗಳು ಆಗಬೇಕಿದ್ದು ತಮ್ಮ ಇಲಾಖೆಯಿಂದ ಅನುದಾನ ಕೊಡಿಸಬೇಕೆಂದು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಗೀತಾ ರಮೇಶ್, ಸದಸ್ಯರಾದ ಸುಶೀಲ ಶೆಟ್ಟಿ, ಶಬನಮ್, ಮಂಜುಳಾ ನಾಗೇಂದ್ರ ಸೇರಿ ಹಲವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು