5:59 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು ಬ್ರಹ್ಮಕುಮಾರೀಸ್ ಕೇಂದ್ರಕ್ಕೆ ವೀರಶೈವ ಧರ್ಮದ ಮಹಾಪುರುಷರು, ಸದ್ಗುರುಗಳು ಭೇಟಿ

21/09/2025, 13:18

ಮಂಗಳೂರು(reporterkarnataka.com): ಬ್ರಹ್ಮಕುಮಾರೀಸ್ ಮಂಗಳೂರಿನ ಕೇಂದ್ರಕ್ಕೆ ವೀರಶೈವ ಧರ್ಮದ ಮಹಾಪುರುಷರು, ಸದ್ಗುರುಗಳು ಹಾಗೂ ಗಣ್ಯರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪೂಜ್ಯಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟ ದೇವರು, ಪೂಜ್ಯಶ್ರೀ ಶಿವಾನಂದ ಮಹಾಸ್ವಾಮಿಗಳು ಹಂದಿಗುಂದ, ಪೂಜ್ಯಶ್ರೀ ಬಸವಲಿಂಗ ಸ್ವಾಮಿಗಳು ಗವಿಮಠ ನವಲಗುಂದ, ಪೂಜ್ಯಶ್ರೀ ಶಿವಾನಂದ ಮಹಾಸ್ವಾಮಿಗಳು ಹೂಲಸೂರ, ಪೂಜ್ಯಶ್ರೀ ಮಹಾಂತಪ್ರಭು ಸ್ವಾಮಿಗಳು ಶೇಗುಣಸಿ, ಪೂಜ್ಯಶ್ರೀ ಬಸವ ದೇವರು ಬಸವಕಲ್ಯಾಣ, ಪೂಜ್ಯಶ್ರೀ ಬಸವಾನಂದ ಸ್ವಾಮಿಗಳು ಮಮ್ಮಿಗಟ್ಟಿ, ಪೂಜ್ಯಶ್ರೀ ವೀರಭದ್ರ ಸ್ವಾಮಿಗಳು ರಾಯಚೂರು ಸೇರಿದಂತೆ ಹಲವಾರು ಧಾರ್ಮಿಕ ಕ್ಷೇತ್ರದ ಮಹನೀಯರು ಆಗಮಿಸಿದರು.

ಅವರ ಗೌರವಾನ್ವಿತ ಸಾನ್ನಿಧ್ಯದಲ್ಲಿ ಬಿ.ಕೆ. ವಿಶ್ವೇಶ್ವರಿ ಅವರು ಆತ್ಮೀಯ ಸ್ವಾಗತ ಸಲ್ಲಿಸಿ, ಆತ್ಮಶಕ್ತಿ, ಧಾರ್ಮಿಕ ಸೌಹಾರ್ದ, ಶಾಂತಿಯ ಸಂದೇಶ ಹಾಗೂ ಪರಮಾತ್ಮನಿಂದ ಸಿಗುವ ದೈವೀ ಮಾರ್ಗದರ್ಶನದ ಕುರಿತು ಈಶ್ವರಿಯ ಸಂದೇಶವನ್ನು ಹಂಚಿಕೊಂಡರು.

ಬ್ರಹ್ಮಕುಮಾರಿ ಸಂಸ್ಥೆಯಲ್ಲಿ ನಡೆಯುತ್ತಿರುವ ಆಧ್ಯಾತ್ಮಿಕ ಸೇವಾಕಾರ್ಯ, ನೈತಿಕ ಮೌಲ್ಯಗಳ ಬೆಳವಣಿಗೆ ಮತ್ತು ಸಮಾಜದ ಶ್ರೇಯೋಭಿವೃದ್ಧಿಗೆ ನೀಡುತ್ತಿರುವ ಕೊಡುಗೆ ಕುರಿತು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಲವು ಬ್ರಹ್ಮಕುಮಾರಿಗಳು, ಬ್ರಹ್ಮಕುಮಾರಿಯರು ಹಾಗೂ ಸೇವಾಭಿಮಾನಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು