9:39 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

*ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ: 60:40 ಫಾರ್ಮುಲಾ ಅನುಸರಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ*

17/07/2026, 21:26

ನವದೆಹಲಿ(reporterkarnataka.com): ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದೆ.
ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ಒಲವು ತೋರಿದ್ದು, ಬಹುಶಃ ಮುಂದಿನ ವಾರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಅತ್ಯಂತ ನಂಬಿಕಸ್ಥ ಮೂಲಗಳಿಂದ ತಿಳಿದು ಬಂದಿದೆ.
ಸದ್ಯದ ಲೆಕ್ಕಾಚಾರಗಳ ಪ್ರಕಾರ, ಜುಲೈ 20ರ ವರೆಗೆ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಹೈಕಮಾಂಡ್ ತಾತ್ಕಾಲಿಕ ಬ್ರೇಕ್ ಹಾಕಿದ್ದು, ಆ ಬಳಿಕ ಹೊಸ ಸಚಿವರ ಸೇರ್ಪಡೆ ಪ್ರಕ್ರಿಯೆ ಚುರುಕುಗೊಳ್ಳಲಿದೆ.

*ಹಳೇ ಪಟ್ಟಿ ನೋಡಿ ಬೇಸರ ವ್ಯಕ್ತಪಡಿಸಿದ ರಾಹುಲ್ ಗಾಂಧಿ:* ಸಚಿವ ಸ್ಥಾನಕ್ಕಾಗಿ ರಾಜ್ಯ ನಾಯಕರು ಸಿದ್ಧಪಡಿಸಿ ಕಳುಹಿಸಿದ್ದ ಹಳೇ ಮುಖಗಳನ್ನೊಳಗೊಂಡ ಪಟ್ಟಿಯನ್ನು ಕಂಡು ಎಐಸಿಸಿ ನಾಯಕ ರಾಹುಲ್ ಗಾಂಧಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದಲ್ಲಿ ಎರಡನೇ ಹಂತದ ಹೊಸ ನಾಯಕತ್ವವನ್ನು ಬೆಳೆಸಬೇಕಾದ ಅಗತ್ಯವಿದೆ. ಆದ್ದರಿಂದ ಹಳೆಯ ಮುಖಗಳನ್ನೇ ಮತ್ತೆ ಸಚಿವರನ್ನಾಗಿ ಮಾಡುವ ಬದಲು, ಈ ಬಾರಿ ಹೊಸಬರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
’60:40′ ಹೊಸ ಸೂತ್ರದ ಜಾರಿ: ಸಂಪುಟ ವಿಸ್ತರಣೆಗೆ ಹೈಕಮಾಂಡ್ ಹೊಸದಾಗಿ ’60:40′ ಸೂತ್ರವನ್ನು ಮುಂದಿಟ್ಟಿದೆ. ಇದರ ಪ್ರಕಾರ, ಶೇಕಡಾ 40 ರಷ್ಟು ಹಿರಿಯ ಶಾಸಕರು ಮತ್ತು ಮಾಜಿ ಸಚಿವರಿಗೆ ಅವಕಾಶ ನೀಡಿದರೆ, ಇನ್ನುಳಿದ ಶೇಕಡಾ 60 ರಷ್ಟು ಸ್ಥಾನಗಳನ್ನು ಕಡ್ಡಾಯವಾಗಿ ಈವರೆಗೆ ಒಮ್ಮೆಯೂ ಸಚಿವರಾಗದ ಹೊಸಬರಿಗೆ ಮೀಸಲಿಡಬೇಕು. ಈ ಮೂಲಕ ಸಚಿವ ಸಂಪುಟದಲ್ಲಿ ಹೊಸ ತಲೆಮಾರಿನ ಯುವ ನಾಯಕರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ನೋಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು