10:00 PM Friday17 - July 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ…

ಇತ್ತೀಚಿನ ಸುದ್ದಿ

*ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ: 60:40 ಫಾರ್ಮುಲಾ ಅನುಸರಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ*

17/07/2026, 21:26

ನವದೆಹಲಿ(reporterkarnataka.com): ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದೆ.
ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ಒಲವು ತೋರಿದ್ದು, ಬಹುಶಃ ಮುಂದಿನ ವಾರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಅತ್ಯಂತ ನಂಬಿಕಸ್ಥ ಮೂಲಗಳಿಂದ ತಿಳಿದು ಬಂದಿದೆ.
ಸದ್ಯದ ಲೆಕ್ಕಾಚಾರಗಳ ಪ್ರಕಾರ, ಜುಲೈ 20ರ ವರೆಗೆ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಹೈಕಮಾಂಡ್ ತಾತ್ಕಾಲಿಕ ಬ್ರೇಕ್ ಹಾಕಿದ್ದು, ಆ ಬಳಿಕ ಹೊಸ ಸಚಿವರ ಸೇರ್ಪಡೆ ಪ್ರಕ್ರಿಯೆ ಚುರುಕುಗೊಳ್ಳಲಿದೆ.

*ಹಳೇ ಪಟ್ಟಿ ನೋಡಿ ಬೇಸರ ವ್ಯಕ್ತಪಡಿಸಿದ ರಾಹುಲ್ ಗಾಂಧಿ:* ಸಚಿವ ಸ್ಥಾನಕ್ಕಾಗಿ ರಾಜ್ಯ ನಾಯಕರು ಸಿದ್ಧಪಡಿಸಿ ಕಳುಹಿಸಿದ್ದ ಹಳೇ ಮುಖಗಳನ್ನೊಳಗೊಂಡ ಪಟ್ಟಿಯನ್ನು ಕಂಡು ಎಐಸಿಸಿ ನಾಯಕ ರಾಹುಲ್ ಗಾಂಧಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದಲ್ಲಿ ಎರಡನೇ ಹಂತದ ಹೊಸ ನಾಯಕತ್ವವನ್ನು ಬೆಳೆಸಬೇಕಾದ ಅಗತ್ಯವಿದೆ. ಆದ್ದರಿಂದ ಹಳೆಯ ಮುಖಗಳನ್ನೇ ಮತ್ತೆ ಸಚಿವರನ್ನಾಗಿ ಮಾಡುವ ಬದಲು, ಈ ಬಾರಿ ಹೊಸಬರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
’60:40′ ಹೊಸ ಸೂತ್ರದ ಜಾರಿ: ಸಂಪುಟ ವಿಸ್ತರಣೆಗೆ ಹೈಕಮಾಂಡ್ ಹೊಸದಾಗಿ ’60:40′ ಸೂತ್ರವನ್ನು ಮುಂದಿಟ್ಟಿದೆ. ಇದರ ಪ್ರಕಾರ, ಶೇಕಡಾ 40 ರಷ್ಟು ಹಿರಿಯ ಶಾಸಕರು ಮತ್ತು ಮಾಜಿ ಸಚಿವರಿಗೆ ಅವಕಾಶ ನೀಡಿದರೆ, ಇನ್ನುಳಿದ ಶೇಕಡಾ 60 ರಷ್ಟು ಸ್ಥಾನಗಳನ್ನು ಕಡ್ಡಾಯವಾಗಿ ಈವರೆಗೆ ಒಮ್ಮೆಯೂ ಸಚಿವರಾಗದ ಹೊಸಬರಿಗೆ ಮೀಸಲಿಡಬೇಕು. ಈ ಮೂಲಕ ಸಚಿವ ಸಂಪುಟದಲ್ಲಿ ಹೊಸ ತಲೆಮಾರಿನ ಯುವ ನಾಯಕರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ನೋಡಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು