8:00 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ

15/12/2021, 13:23

Reporterkarnataka.com
ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್‌ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂ‍ಪ್ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

‘ಡಿಸೆಂಬರ್‌ 8ರ ಹೆಲಿಕಾಪ್ಟರ್‌ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ಶೌರ್ಯವಂತ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು ನಮ್ಮನ್ನು ಅಗಲಿದ್ದಾರೆ. ಇಂದು ಬೆಳಿಗ್ಗೆ ಅವರು ನಿಧನರಾದರು… ‘ ಎಂದು ಭಾರತೀಯ ವಾಯು ಪಡೆ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ವಾಯುಪಡೆಯ ಹೆಲಿಕಾಪ್ಟರ್‌ ದುರಂತದಲ್ಲಿ ವರುಣ್ ಸಿಂಗ್‌ ಗಂಭೀರವಾಗಿ ಗಾಯಗೊಂಡಿದ್ದರು.

ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್‌ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿತ್ತು.

ಹೆಲಿಕಾಪ್ಟರ್‌ ಅವಘಡದಲ್ಲಿ ಸಿಡಿಎಸ್‌ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು