ಇತ್ತೀಚಿನ ಸುದ್ದಿ
ಗೃಹ ಸಚಿವ ಅರಗ ಜ್ಞಾನೇಂದ್ರ ಆಸ್ಪತ್ರೆ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಣೆ
23/11/2022, 22:00

ಮಂಗಳೂರು(reporterkarnataka.com): ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬುಧವಾರ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಶೀಘ್ರ ಗುಣಮುಖರಾಗುವಂತೆ ಗೃಹ ಸಚಿವರು ಈ ಸಂದರ್ಭದಲ್ಲಿ ಹಾರೈಸಿದರು. ಶಾಸಕ ವೇದವ್ಯಾಸ ಕಾಮತ್, ಕಾರ್ಪೋರೇಟರ್ ಮನೋಹರ್ ಕದ್ರಿ,ಬಿಜೆಪಿ ಮುಖಂಡರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ಜಗದೀಶ ಶೇಣವ, ಚರಿತ್ ಪೂಜಾರಿ ಮತ್ತಿತರರು ಜೊತೆಗಿದ್ದರು