11:06 PM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಗೃಹಲಕ್ಷ್ಮಿ ಯೋಜನೆ ಅತ್ಯಂತ ಯಶಸ್ವಿ: ಸಿದ್ದು ಸವದಿ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

22/02/2024, 23:59

ಬೆಂಗಳೂರು(reporterkarnataka.com): ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ಗುರುವಾರ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಗೃಹಲಕ್ಷ್ಮಿ ಯೋಜನೆ ಅರ್ಹರಿಗೆ ತಲುಪುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಗೆ 1.28 ಕೋಟಿ ಮಹಿಳೆಯರು ಅರ್ಹರಿದ್ದು, ಈ ಪೈಕಿ ಯೋಜನೆಗೆ ನೋಂದಣಿಯಾಗಿರುವ 1.18 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಬಜೆಟ್‌ನಲ್ಲಿ ವಾರ್ಷಿಕ 34 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದರು.
ಇದೊಂದು ದೊಡ್ಡ ಯೋಜನೆ. ಗೃಹಲಕ್ಷ್ಮಿ ಬಂದ ಬಳಿಕ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ ಎಂದು ಹೇಳಿದರು. ಎಲ್ಲಾ ಫಲಾನುಭವಿಗಳು ಸರ್ಕಾರಕ್ಕೆ ಆಶೀರ್ವಾದ ಮಾಡುತ್ತಿದ್ದಾರೆ. ನೀವಷ್ಟೇ (ವಿರೋಧ ಪಕ್ಷ) ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದೀರಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದರು.
ಗೃಹಲಕ್ಷ್ಮಿ ಯೋಜನೆ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮಂದಿಗೆ ತಲುಪಿದೆ. ಇದರಿಂದ ಆಗಿರುವ ಅನುಕೂಲವೇನು ಎನ್ನುವುದನ್ನು ಅಂಕಿ ಅಂಶ ಸಮೇತ ಬೇಕಿದ್ದರೆ ನೀಡುವೆ. ಅನಾವಶ್ಯಕವಾಗಿ ಯೋಜನೆ ಬಗ್ಗೆ ಟೀಕೆ ಮಾಡಬೇಡಿ ಎಂದು ಹೇಳಿದರು.
ಸರಾಸರಿ ನೂರು ಜನರಲ್ಲಿ 97 ಮಂದಿಗೆ ಯೋಜನೆ ತಲುಪಿದ್ದು, ಉಳಿದ ಮೂರು ಮಂದಿಗೆ ಕೆಲವೊಂದು ಕಾರಣದಿಂದ ತಲುಪಿಲ್ಲ. ಈ ಸಮಸ್ಯೆಗೆ ನಮ್ಮ ಇಲಾಖೆಯ ಅಧಿಕಾರಿಗಳು ಪರಿಹಾರ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಯೋಜನೆಯ ಹಣ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇಲ್ಲಿ ಮಧ್ಯವರ್ತಿಗಳ ಕಾಟ ಇರುವುದಿಲ್ಲ. ವಿಧವಾ ವೇತನ ಪಡೆಯಲು ಲಂಚ ನೀಡುವ ಸ್ಥಿತಿ ಇತ್ತು. ಆದರೆ ಗೃಹಲಕ್ಷ್ಮಿ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಹಿರಿಯ ಶಾಸಕರು ಸದನಕ್ಕೆ ತಪ್ಪು ಮಾಹಿತಿ ನೀಡಬಾರದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿನಂತಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು