2:46 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಗೃಹಲಕ್ಷ್ಮಿ ಯೋಜನೆ ಅತ್ಯಂತ ಯಶಸ್ವಿ: ಸಿದ್ದು ಸವದಿ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

22/02/2024, 23:59

ಬೆಂಗಳೂರು(reporterkarnataka.com): ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ಗುರುವಾರ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಗೃಹಲಕ್ಷ್ಮಿ ಯೋಜನೆ ಅರ್ಹರಿಗೆ ತಲುಪುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಗೆ 1.28 ಕೋಟಿ ಮಹಿಳೆಯರು ಅರ್ಹರಿದ್ದು, ಈ ಪೈಕಿ ಯೋಜನೆಗೆ ನೋಂದಣಿಯಾಗಿರುವ 1.18 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಬಜೆಟ್‌ನಲ್ಲಿ ವಾರ್ಷಿಕ 34 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದರು.
ಇದೊಂದು ದೊಡ್ಡ ಯೋಜನೆ. ಗೃಹಲಕ್ಷ್ಮಿ ಬಂದ ಬಳಿಕ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ ಎಂದು ಹೇಳಿದರು. ಎಲ್ಲಾ ಫಲಾನುಭವಿಗಳು ಸರ್ಕಾರಕ್ಕೆ ಆಶೀರ್ವಾದ ಮಾಡುತ್ತಿದ್ದಾರೆ. ನೀವಷ್ಟೇ (ವಿರೋಧ ಪಕ್ಷ) ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದೀರಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದರು.
ಗೃಹಲಕ್ಷ್ಮಿ ಯೋಜನೆ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮಂದಿಗೆ ತಲುಪಿದೆ. ಇದರಿಂದ ಆಗಿರುವ ಅನುಕೂಲವೇನು ಎನ್ನುವುದನ್ನು ಅಂಕಿ ಅಂಶ ಸಮೇತ ಬೇಕಿದ್ದರೆ ನೀಡುವೆ. ಅನಾವಶ್ಯಕವಾಗಿ ಯೋಜನೆ ಬಗ್ಗೆ ಟೀಕೆ ಮಾಡಬೇಡಿ ಎಂದು ಹೇಳಿದರು.
ಸರಾಸರಿ ನೂರು ಜನರಲ್ಲಿ 97 ಮಂದಿಗೆ ಯೋಜನೆ ತಲುಪಿದ್ದು, ಉಳಿದ ಮೂರು ಮಂದಿಗೆ ಕೆಲವೊಂದು ಕಾರಣದಿಂದ ತಲುಪಿಲ್ಲ. ಈ ಸಮಸ್ಯೆಗೆ ನಮ್ಮ ಇಲಾಖೆಯ ಅಧಿಕಾರಿಗಳು ಪರಿಹಾರ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಯೋಜನೆಯ ಹಣ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇಲ್ಲಿ ಮಧ್ಯವರ್ತಿಗಳ ಕಾಟ ಇರುವುದಿಲ್ಲ. ವಿಧವಾ ವೇತನ ಪಡೆಯಲು ಲಂಚ ನೀಡುವ ಸ್ಥಿತಿ ಇತ್ತು. ಆದರೆ ಗೃಹಲಕ್ಷ್ಮಿ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಹಿರಿಯ ಶಾಸಕರು ಸದನಕ್ಕೆ ತಪ್ಪು ಮಾಹಿತಿ ನೀಡಬಾರದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿನಂತಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು