7:40 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಗೃಹಲಕ್ಷ್ಮಿ ಯೋಜನೆ ಅತ್ಯಂತ ಯಶಸ್ವಿ: ಸಿದ್ದು ಸವದಿ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

22/02/2024, 23:59

ಬೆಂಗಳೂರು(reporterkarnataka.com): ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬಜೆಟ್ ಮೇಲಿನ ಚರ್ಚೆ ವೇಳೆ ಗುರುವಾರ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಗೃಹಲಕ್ಷ್ಮಿ ಯೋಜನೆ ಅರ್ಹರಿಗೆ ತಲುಪುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಗೆ 1.28 ಕೋಟಿ ಮಹಿಳೆಯರು ಅರ್ಹರಿದ್ದು, ಈ ಪೈಕಿ ಯೋಜನೆಗೆ ನೋಂದಣಿಯಾಗಿರುವ 1.18 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಬಜೆಟ್‌ನಲ್ಲಿ ವಾರ್ಷಿಕ 34 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದರು.
ಇದೊಂದು ದೊಡ್ಡ ಯೋಜನೆ. ಗೃಹಲಕ್ಷ್ಮಿ ಬಂದ ಬಳಿಕ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ ಎಂದು ಹೇಳಿದರು. ಎಲ್ಲಾ ಫಲಾನುಭವಿಗಳು ಸರ್ಕಾರಕ್ಕೆ ಆಶೀರ್ವಾದ ಮಾಡುತ್ತಿದ್ದಾರೆ. ನೀವಷ್ಟೇ (ವಿರೋಧ ಪಕ್ಷ) ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದೀರಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದರು.
ಗೃಹಲಕ್ಷ್ಮಿ ಯೋಜನೆ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮಂದಿಗೆ ತಲುಪಿದೆ. ಇದರಿಂದ ಆಗಿರುವ ಅನುಕೂಲವೇನು ಎನ್ನುವುದನ್ನು ಅಂಕಿ ಅಂಶ ಸಮೇತ ಬೇಕಿದ್ದರೆ ನೀಡುವೆ. ಅನಾವಶ್ಯಕವಾಗಿ ಯೋಜನೆ ಬಗ್ಗೆ ಟೀಕೆ ಮಾಡಬೇಡಿ ಎಂದು ಹೇಳಿದರು.
ಸರಾಸರಿ ನೂರು ಜನರಲ್ಲಿ 97 ಮಂದಿಗೆ ಯೋಜನೆ ತಲುಪಿದ್ದು, ಉಳಿದ ಮೂರು ಮಂದಿಗೆ ಕೆಲವೊಂದು ಕಾರಣದಿಂದ ತಲುಪಿಲ್ಲ. ಈ ಸಮಸ್ಯೆಗೆ ನಮ್ಮ ಇಲಾಖೆಯ ಅಧಿಕಾರಿಗಳು ಪರಿಹಾರ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಗೃಹಲಕ್ಷ್ಮಿ ಯೋಜನೆಯ ಹಣ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇಲ್ಲಿ ಮಧ್ಯವರ್ತಿಗಳ ಕಾಟ ಇರುವುದಿಲ್ಲ. ವಿಧವಾ ವೇತನ ಪಡೆಯಲು ಲಂಚ ನೀಡುವ ಸ್ಥಿತಿ ಇತ್ತು. ಆದರೆ ಗೃಹಲಕ್ಷ್ಮಿ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಹಿರಿಯ ಶಾಸಕರು ಸದನಕ್ಕೆ ತಪ್ಪು ಮಾಹಿತಿ ನೀಡಬಾರದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿನಂತಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು