3:54 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ನಕಲಿ ಕಾಟ!: ಸೈಬರ್ ಸೆಂಟರ್ ಗಳಲ್ಲಿ 100ರಿಂದ 200 ರೂಪಾಯಿಗೆ ಮಾರಾಟವಾಗುತ್ತಿರುವ ಡುಬ್ಲಿಕೇಟ್ ಅರ್ಜಿ!!

19/07/2023, 10:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ನಕಲಿ ಕಾಟ ಶುರುವಾಗಿದೆ. ಬಡವರಿಗೆ ಸಹಾಯವಾಗುವ ಯಾವುದೇ ಯೋಜನೆ ಜಾರಿಗೊಳಿಸಿದರೂ ಅದನ್ನು ವಿಫಲಗೊಳಿಸುವ ಪ್ರಯತ್ನ ನಡೆಯುತ್ತಲೇ ಇರುತ್ತದೆ.


ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕಲಿ ಅರ್ಜಿಗಳ ಮಾರಾಟ ಶುರುವಾಗಿದೆ. ಜಿಲ್ಲೆಯ ಹಲವೆಡೆ ನಕಲಿ ನೋಂದಣಿ ಪತ್ರಗಳ ಮಾರಾಟ ನಡೆಯುತ್ತಿದೆ. 100 ರಿಂದ 200 ರೂಪಾಯಿಗೆ ಅರ್ಜಿಗಳ ಮಾರಾಟ ಮಾಡಿ, ಹಣ ಮಾಡಲಾಗುತ್ತಿದೆ.
ನಕಲಿ ಅರ್ಜಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫೋಟೋ ಬಳಕೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಹಲವು ಸೈಬರ್ ಸೆಂಟರ್ ಗಳಲ್ಲಿ ನಕಲಿ ಅರ್ಜಿಗಳ ಹಾವಳಿ ಜಾಸ್ತಿಯಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಶೃಂಗೇರಿ ಯುವ ಕಾಂಗ್ರೆಸ್ ಆಗ್ರಹಿಸಿದೆ. ಶೀಘ್ರ ಕ್ರಮಕ್ಕೆ ಶೃಂಗೇರಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು