3:32 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಜಿಎಸ್‌ಟಿ ಸರಳೀಕರಣ | ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ ಕಾಮತ್

04/09/2025, 20:12

ಮಂಗಳೂರು(reporterkarnataka.com): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ, ಆರೋಗ್ಯ, ರಕ್ಷಣಾ, ಕೃಷಿ, ಆಟೋಮೊಬೈಲ್, ಎಲೆಕ್ಟ್ರಾನಿಕ್, ಹೀಗೆ ಜನಸಾಮಾನ್ಯರ ಬದುಕಿಗೆ ಅಗತ್ಯವಿರುವ ಎಲ್ಲಾ ವಸ್ತುಗಳ ತೆರಿಗೆ ಗಣನೀಯವಾಗಿ ಇಳಿಕೆಯಾಗಲಿದೆ. ಆ ಮೂಲಕ ರೈತರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು, ಉದ್ಯಮಿಗಳು, ಹೀಗೆ ಪ್ರತಿಯೊಂದು ವಲಯಕ್ಕೂ ಈ ಸುಧಾರಣೆಗಳು ತಲುಪಲಿದ್ದು ಜನತೆಯ ಜೀವನ ಮಟ್ಟ ಇನ್ನಷ್ಟು ಸುಧಾರಣೆಯಾಗಲಿದೆ ಎಂದರು.
ಒಂದೆಡೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲದರ ಬೆಲೆ ಹೆಚ್ಚಿಸಿ ಜನರ ಬದುಕನ್ನು ದುಸ್ತರಗೊಳಿಸುತ್ತಿರುವ ಈ ಸಂದರ್ಭದಲ್ಲಿ ಜನಸಾಮಾನ್ಯರಿಗೆ ತೆರಿಗೆ ಭಾರ ಹೆಚ್ಚಿಸುವುದಲ್ಲ, ಇಳಿಸುವುದಕ್ಕೆ ನಮ್ಮ ಆದ್ಯತೆ ಎಂದು ಶೇ.12 ಮತ್ತು ಶೇ.28ರ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ ಶೇ.5 ಮತ್ತು ಶೇ.18 ಸ್ಲ್ಯಾಬ್‌ಗೆ ಮಾತ್ರ ಅನುಮೋದನೆ ನೀಡಿದ್ದು ದೇಶದ ಪಾಲಿಗೆ ದಸರಾ ಹಾಗೂ ದೀಪಾವಳಿ ಉಡುಗೊರೆಯಾಗಿದೆ. ಆ ಕಾರಣಕ್ಕಾಗಿ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ನಾಡಿನ ಜನತೆಯ ಪರವಾಗಿ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು