4:03 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಜಿಎಸ್‌ಟಿ ಸರಳೀಕರಣ | ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ ಕಾಮತ್

04/09/2025, 20:12

ಮಂಗಳೂರು(reporterkarnataka.com): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ, ಆರೋಗ್ಯ, ರಕ್ಷಣಾ, ಕೃಷಿ, ಆಟೋಮೊಬೈಲ್, ಎಲೆಕ್ಟ್ರಾನಿಕ್, ಹೀಗೆ ಜನಸಾಮಾನ್ಯರ ಬದುಕಿಗೆ ಅಗತ್ಯವಿರುವ ಎಲ್ಲಾ ವಸ್ತುಗಳ ತೆರಿಗೆ ಗಣನೀಯವಾಗಿ ಇಳಿಕೆಯಾಗಲಿದೆ. ಆ ಮೂಲಕ ರೈತರು, ಬಡವರು, ಮಧ್ಯಮ ವರ್ಗದವರು, ಮಹಿಳೆಯರು ಮತ್ತು ಯುವಕರು, ಉದ್ಯಮಿಗಳು, ಹೀಗೆ ಪ್ರತಿಯೊಂದು ವಲಯಕ್ಕೂ ಈ ಸುಧಾರಣೆಗಳು ತಲುಪಲಿದ್ದು ಜನತೆಯ ಜೀವನ ಮಟ್ಟ ಇನ್ನಷ್ಟು ಸುಧಾರಣೆಯಾಗಲಿದೆ ಎಂದರು.
ಒಂದೆಡೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎಲ್ಲದರ ಬೆಲೆ ಹೆಚ್ಚಿಸಿ ಜನರ ಬದುಕನ್ನು ದುಸ್ತರಗೊಳಿಸುತ್ತಿರುವ ಈ ಸಂದರ್ಭದಲ್ಲಿ ಜನಸಾಮಾನ್ಯರಿಗೆ ತೆರಿಗೆ ಭಾರ ಹೆಚ್ಚಿಸುವುದಲ್ಲ, ಇಳಿಸುವುದಕ್ಕೆ ನಮ್ಮ ಆದ್ಯತೆ ಎಂದು ಶೇ.12 ಮತ್ತು ಶೇ.28ರ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ ಶೇ.5 ಮತ್ತು ಶೇ.18 ಸ್ಲ್ಯಾಬ್‌ಗೆ ಮಾತ್ರ ಅನುಮೋದನೆ ನೀಡಿದ್ದು ದೇಶದ ಪಾಲಿಗೆ ದಸರಾ ಹಾಗೂ ದೀಪಾವಳಿ ಉಡುಗೊರೆಯಾಗಿದೆ. ಆ ಕಾರಣಕ್ಕಾಗಿ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ನಾಡಿನ ಜನತೆಯ ಪರವಾಗಿ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು