4:15 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಕರಾವಳಿಯ ಜನರಿಗೆ ಗೌರವಯುತವಾಗಿ ಬದುಕುವ ಗ್ಯಾರಂಟಿ ಕೊಡಿ: ಪೊಲೀಸ್ ವೈಫಲ್ಯದ ವಿರುದ್ಧ ಇನಾಯತ್ ಆಲಿ ಆಕ್ರೋಶ

29/05/2025, 23:01

ಮಂಗಳೂರು(reporterkarnataka.com):ಅಮಾಯಕ ಯುವಕನ ಕೊಲೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ, ಕೋಮು ಸಂಘರ್ಷ ಹುಟ್ಟು ಹಾಕುವಂತಹ ಘಟನೆಗಳು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳುಗೆಡಹಿದೆ. ಶಾಂತಿಯ ವಾತಾವರಣವನ್ನು ಕೆಡಿಸಿ ಆ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರಗಳ ಭಾಗವಾಗಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಕೆಪಿಸಿಸಿ ಪ್ರಧಾನ
ಕಾರ್ಯದರ್ಶಿ ಇನಾಯತ್ ಅಲಿ ಹೇಳಿದ್ದಾರೆ.
ಪ್ರತಿಯೊಂದು ಘಟನೆಗಳು ನಡೆದಾಗಲೂ ಅದನ್ನು ಸರಕಾರಕ್ಕೆ ತಲುಪಿಸುವಂಹ ಕೆಲಸ ನಡೆದರೂ ರಾಜ್ಯದ ಗೃಹ ಇಲಾಖೆ ಈ ಬಗ್ಗೆ ಗಮನ ಹರಿಸಿಲ್ಲ. ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆಗಳು ಒಂದೂ ಈಡೇರಿಲ್ಲ. ಹಾಗಾಗಿ, ಇನ್ನಾದರೂ ಕರಾವಳಿಯ ಈ ನೆತ್ತರ ರಾಜಕೀಯ ಕೊನೆಯಾಗಬೇಕಿದೆ. ಸರಕಾರ ದ್ವೇಷ ಭಾಷಣಕಾರರು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಟ ಶಕ್ತಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಿ ಇಲ್ಲಿನ ಜನರಿಗೆ ಮಿಕ್ಕ ಎಲ್ಲಾ ಗ್ಯಾರಂಟಿಗಳಿಗಿಂತ ಹೊರತಾಗಿ ಮೊದಲು ಗೌರವಯುತವಾಗಿ, ನೆಮ್ಮದಿಯಿಂದ ಬದುಕುವ ಗ್ಯಾರಂಟಿಯನ್ನು, ಶಾಂತಿಯುತ ವಾತಾವರಣವನ್ನು ನಿರ್ಮಿಸಿ ಕೊಡಬೇಕು. ಈ ಕೊಲೆ ಕೃತ್ಯಗಳ ಮೂಲ ಪತ್ತೆ ಹಚ್ಚಿ, ಅದಕ್ಕೆ ಕುಮ್ಮಕ್ಕು ನೀಡುವಂತಹ ಶಕ್ತಿಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಕಾನೂನು ಶಿಕ್ಷೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು