12:17 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕರಾವಳಿಯ ಜನರಿಗೆ ಗೌರವಯುತವಾಗಿ ಬದುಕುವ ಗ್ಯಾರಂಟಿ ಕೊಡಿ: ಪೊಲೀಸ್ ವೈಫಲ್ಯದ ವಿರುದ್ಧ ಇನಾಯತ್ ಆಲಿ ಆಕ್ರೋಶ

29/05/2025, 23:01

ಮಂಗಳೂರು(reporterkarnataka.com):ಅಮಾಯಕ ಯುವಕನ ಕೊಲೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ, ಕೋಮು ಸಂಘರ್ಷ ಹುಟ್ಟು ಹಾಕುವಂತಹ ಘಟನೆಗಳು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳುಗೆಡಹಿದೆ. ಶಾಂತಿಯ ವಾತಾವರಣವನ್ನು ಕೆಡಿಸಿ ಆ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರಗಳ ಭಾಗವಾಗಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಕೆಪಿಸಿಸಿ ಪ್ರಧಾನ
ಕಾರ್ಯದರ್ಶಿ ಇನಾಯತ್ ಅಲಿ ಹೇಳಿದ್ದಾರೆ.
ಪ್ರತಿಯೊಂದು ಘಟನೆಗಳು ನಡೆದಾಗಲೂ ಅದನ್ನು ಸರಕಾರಕ್ಕೆ ತಲುಪಿಸುವಂಹ ಕೆಲಸ ನಡೆದರೂ ರಾಜ್ಯದ ಗೃಹ ಇಲಾಖೆ ಈ ಬಗ್ಗೆ ಗಮನ ಹರಿಸಿಲ್ಲ. ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆಗಳು ಒಂದೂ ಈಡೇರಿಲ್ಲ. ಹಾಗಾಗಿ, ಇನ್ನಾದರೂ ಕರಾವಳಿಯ ಈ ನೆತ್ತರ ರಾಜಕೀಯ ಕೊನೆಯಾಗಬೇಕಿದೆ. ಸರಕಾರ ದ್ವೇಷ ಭಾಷಣಕಾರರು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಟ ಶಕ್ತಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಿ ಇಲ್ಲಿನ ಜನರಿಗೆ ಮಿಕ್ಕ ಎಲ್ಲಾ ಗ್ಯಾರಂಟಿಗಳಿಗಿಂತ ಹೊರತಾಗಿ ಮೊದಲು ಗೌರವಯುತವಾಗಿ, ನೆಮ್ಮದಿಯಿಂದ ಬದುಕುವ ಗ್ಯಾರಂಟಿಯನ್ನು, ಶಾಂತಿಯುತ ವಾತಾವರಣವನ್ನು ನಿರ್ಮಿಸಿ ಕೊಡಬೇಕು. ಈ ಕೊಲೆ ಕೃತ್ಯಗಳ ಮೂಲ ಪತ್ತೆ ಹಚ್ಚಿ, ಅದಕ್ಕೆ ಕುಮ್ಮಕ್ಕು ನೀಡುವಂತಹ ಶಕ್ತಿಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಕಾನೂನು ಶಿಕ್ಷೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು