2:34 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಗುಜರಾತ್: ಸೇತುವೆ ಕುಸಿತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ; 5 ಮಂದಿಯ ರಕ್ಷಣೆ

09/07/2025, 20:15

ಅಹಮದಾಬಾದ್(reporterkarnataka.com): ಗುಜರಾತ್‌ ನ ವಡೋದರಾ ಜಿಲ್ಲೆಯ ಮುಜ್‌ಪುರ ಬಳಿಯ ಸೇತುವೆಯೊಂದು ಬುಧವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ಹಲವಾರು ವಾಹನಗಳು ನದಿಗೆ ಬಿದ್ದು, ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ.
ಕೇವಲ 40 ವರ್ಷಗಳಷ್ಟು ಹಳೆಯದಾದ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ದುರಂತದಲ್ಲಿ ಐವರನ್ನು ರಕ್ಷಿಸಲಾಗಿದೆ.

ಯಾವುದೇ ಮುನ್ಸೂಚನೆ ಸಿಗದೆ ಸೇತುವೆ ಏಕಾಏಕಿ ಕುಸಿದು ಬಿದ್ದಿದ್ದು, ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಬಿದ್ದಿವೆ. ಕೆಲವೇ ನಿಮಿಷಗಳಲ್ಲಿ, ಗ್ರಾಮಸ್ಥರು ಸುದ್ದಿ ಮುಟ್ಟಿಸಿ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಐವರನ್ನು ರಕ್ಷಿಸುವಲ್ಲಿ ಸಫಲವಾಗಿದೆ.
ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಭಾಗಗಳನ್ನು ಸಂಪರ್ಕಿಸುವ ನದಿಗೆ ಗಂಭೀರಾ ಸೇತುವೆ ನಿರ್ಮಿಸಲಾಗಿತ್ತು. ಇದರ ಸ್ಲ್ಯಾಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ.
ಸೇತುವೆಯನ್ನು 1985 ರಲ್ಲಿ ನಿರ್ಮಿಸಲಾಗಿತ್ತು. ಅದರ ನಿರ್ವಹಣೆಯನ್ನು ಅಗತ್ಯವಿದ್ದಾಗ ನಿಯತಕಾಲಿಕವಾಗಿ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು