3:19 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗುಜರಾತ್: ಸೇತುವೆ ಕುಸಿತದಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ; 5 ಮಂದಿಯ ರಕ್ಷಣೆ

09/07/2025, 20:15

ಅಹಮದಾಬಾದ್(reporterkarnataka.com): ಗುಜರಾತ್‌ ನ ವಡೋದರಾ ಜಿಲ್ಲೆಯ ಮುಜ್‌ಪುರ ಬಳಿಯ ಸೇತುವೆಯೊಂದು ಬುಧವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ಹಲವಾರು ವಾಹನಗಳು ನದಿಗೆ ಬಿದ್ದು, ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ.
ಕೇವಲ 40 ವರ್ಷಗಳಷ್ಟು ಹಳೆಯದಾದ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ದುರಂತದಲ್ಲಿ ಐವರನ್ನು ರಕ್ಷಿಸಲಾಗಿದೆ.

ಯಾವುದೇ ಮುನ್ಸೂಚನೆ ಸಿಗದೆ ಸೇತುವೆ ಏಕಾಏಕಿ ಕುಸಿದು ಬಿದ್ದಿದ್ದು, ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಬಿದ್ದಿವೆ. ಕೆಲವೇ ನಿಮಿಷಗಳಲ್ಲಿ, ಗ್ರಾಮಸ್ಥರು ಸುದ್ದಿ ಮುಟ್ಟಿಸಿ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಐವರನ್ನು ರಕ್ಷಿಸುವಲ್ಲಿ ಸಫಲವಾಗಿದೆ.
ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಭಾಗಗಳನ್ನು ಸಂಪರ್ಕಿಸುವ ನದಿಗೆ ಗಂಭೀರಾ ಸೇತುವೆ ನಿರ್ಮಿಸಲಾಗಿತ್ತು. ಇದರ ಸ್ಲ್ಯಾಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ.
ಸೇತುವೆಯನ್ನು 1985 ರಲ್ಲಿ ನಿರ್ಮಿಸಲಾಗಿತ್ತು. ಅದರ ನಿರ್ವಹಣೆಯನ್ನು ಅಗತ್ಯವಿದ್ದಾಗ ನಿಯತಕಾಲಿಕವಾಗಿ ಮಾಡಲಾಗುತ್ತಿತ್ತು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು