6:45 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಫಾದರ್ ಮುಲ್ಲರ್ ಸಂಸ್ಥೆಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ: ಮಂಗಳೂರು ಬಿಷಪ್ ಪೀಟರ್ ಪೌಲ್ ಸಾಲ್ದಾನಾ

18/10/2023, 12:19

ಮಂಗಳೂರು(reporterkarnataka.com): ಫಾದರ್ ಮುಲ್ಲರ್ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಸೇವಾ ಮನೋಭಾವ ಬೆಳೆಸುವ ಶ್ರೇಷ್ಠ ಸಂಸ್ಥೆಯಾಗಿದೆ ಎಂದು ಪುತ್ತೂರು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಹೇಳಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಮೂಲಕ ಹಮ್ಮಿಕೊಂಡಿದ್ದ ಫಾದರ್ ಮುಲ್ಲರ್ ಎಂಬಿಬಿಎಸ್ ಪದವಿ ಕಾಲೇಜಿನ ಬೆಳ್ಳಿಹಬ್ಬದ ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಳ್ಳಿಹಬ್ಬ ಆಚರಿಸುತ್ತಿರುವ ಫಾದರ್ ಮುಲ್ಲರ್ ಎಂಬಿಬಿಎಸ್ ಸಂಸ್ಥೆ ಸಾಗಿ ಬಂದ ದಾರಿ ಶ್ಲಾಘನೀಯ. ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ವೈದ್ಯಕೀಯ ಪದವಿ ಪಡೆದಿರುವುದು ಅವಿಸ್ಮರಣೀಯ ಅನುಭವ ನೀಡಿದೆ ಎಂದರು.


ಶಿಕ್ಷಣದ ಜತೆಗೆ ವ್ಯಕ್ತಿತ್ವ ಬೆಳವಣಿಗೆ ಅತ್ಯಗತ್ಯ. ರ‍್ಯಾಂಕ್ ಗಳಿಕೆಗೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕದೇ ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಸರ್ವಾಂಗೀಣ ಬೆಳವಣಿಗೆಗೆ ಪೋಷಕರು ಸಹಾಯ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷ ಹಾಗೂ ಮಂಗಳೂರು ಬಿಷಪ್ ಅತೀ ವಂದನೀಯ ಪೀಟರ್ ಪೌಲ್ ಸಾಲ್ದಾನಾ ಮಾತನಾಡಿ, ಫಾದರ್ ಮುಲ್ಲರ್ ಸಂಸ್ಥೆ ತನ್ನ ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಜಾಗತಿಕ ಮಟ್ಟದ ಖ್ಯಾತಿ ಗಳಿಸಿದೆ ಎಂದರು.
ತುಂಬೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮುಖ್ಯಸ್ಥ ಡಾ.ಆಂಟನಿ ಸಿಲ್ವನ್ ಡಿ ಸೋಜ ಅವರು ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮ ಗಳ ಬಗ್ಗೆ ತಿಳಿಸಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಸ್ವಾಗತಿಸಿದರು. ಫಾದರ್ ಮುಲ್ಲರ್ ಸೇವಾ ಸಂಸ್ಥೆ ಗಳ ವಿವಿಧ ವಿಭಾಗದ ಮುಖ್ಯಸ್ಥ ಅಜಿತ್ ಮಿನೇಜಸ್, ವಿನ್ಸೆಂಟ್ ಸಿಲ್ವೇಸ್ಟ್ ರ್ ಲೋಬೊ, ಜೀವನ್ ಸಿಕ್ವೇರ, ಡಾ. ಉದಯ ಕುಮಾರ್, ಡಾ. ಪ್ರಭು ಕಿರಣ್, ಡಾ. ಹೀಲ್ಡಾ, ಜೆಸಿಂತಾ, ಡಾ. ಚರಿಷ್ಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು