11:36 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಫಾದರ್ ಮುಲ್ಲರ್ ಸಂಸ್ಥೆಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ: ಮಂಗಳೂರು ಬಿಷಪ್ ಪೀಟರ್ ಪೌಲ್ ಸಾಲ್ದಾನಾ

18/10/2023, 12:19

ಮಂಗಳೂರು(reporterkarnataka.com): ಫಾದರ್ ಮುಲ್ಲರ್ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಸೇವಾ ಮನೋಭಾವ ಬೆಳೆಸುವ ಶ್ರೇಷ್ಠ ಸಂಸ್ಥೆಯಾಗಿದೆ ಎಂದು ಪುತ್ತೂರು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಹೇಳಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಮೂಲಕ ಹಮ್ಮಿಕೊಂಡಿದ್ದ ಫಾದರ್ ಮುಲ್ಲರ್ ಎಂಬಿಬಿಎಸ್ ಪದವಿ ಕಾಲೇಜಿನ ಬೆಳ್ಳಿಹಬ್ಬದ ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಳ್ಳಿಹಬ್ಬ ಆಚರಿಸುತ್ತಿರುವ ಫಾದರ್ ಮುಲ್ಲರ್ ಎಂಬಿಬಿಎಸ್ ಸಂಸ್ಥೆ ಸಾಗಿ ಬಂದ ದಾರಿ ಶ್ಲಾಘನೀಯ. ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ವೈದ್ಯಕೀಯ ಪದವಿ ಪಡೆದಿರುವುದು ಅವಿಸ್ಮರಣೀಯ ಅನುಭವ ನೀಡಿದೆ ಎಂದರು.


ಶಿಕ್ಷಣದ ಜತೆಗೆ ವ್ಯಕ್ತಿತ್ವ ಬೆಳವಣಿಗೆ ಅತ್ಯಗತ್ಯ. ರ‍್ಯಾಂಕ್ ಗಳಿಕೆಗೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕದೇ ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಸರ್ವಾಂಗೀಣ ಬೆಳವಣಿಗೆಗೆ ಪೋಷಕರು ಸಹಾಯ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷ ಹಾಗೂ ಮಂಗಳೂರು ಬಿಷಪ್ ಅತೀ ವಂದನೀಯ ಪೀಟರ್ ಪೌಲ್ ಸಾಲ್ದಾನಾ ಮಾತನಾಡಿ, ಫಾದರ್ ಮುಲ್ಲರ್ ಸಂಸ್ಥೆ ತನ್ನ ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಜಾಗತಿಕ ಮಟ್ಟದ ಖ್ಯಾತಿ ಗಳಿಸಿದೆ ಎಂದರು.
ತುಂಬೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮುಖ್ಯಸ್ಥ ಡಾ.ಆಂಟನಿ ಸಿಲ್ವನ್ ಡಿ ಸೋಜ ಅವರು ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮ ಗಳ ಬಗ್ಗೆ ತಿಳಿಸಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಸ್ವಾಗತಿಸಿದರು. ಫಾದರ್ ಮುಲ್ಲರ್ ಸೇವಾ ಸಂಸ್ಥೆ ಗಳ ವಿವಿಧ ವಿಭಾಗದ ಮುಖ್ಯಸ್ಥ ಅಜಿತ್ ಮಿನೇಜಸ್, ವಿನ್ಸೆಂಟ್ ಸಿಲ್ವೇಸ್ಟ್ ರ್ ಲೋಬೊ, ಜೀವನ್ ಸಿಕ್ವೇರ, ಡಾ. ಉದಯ ಕುಮಾರ್, ಡಾ. ಪ್ರಭು ಕಿರಣ್, ಡಾ. ಹೀಲ್ಡಾ, ಜೆಸಿಂತಾ, ಡಾ. ಚರಿಷ್ಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು