4:47 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಗುಂಡಿ ಬಿದ್ದ ಮುರುವ- ಅರಳತ್ತಡ್ಕ ರಸ್ತೆ: ಸಂಕಷ್ಟದಲ್ಲಿ ಪಾದಚಾರಿಗಳು, ವಾಹನ ಸವಾರರು

05/08/2023, 23:16

ಬಂಟ್ವಾಳ(reporterkarnataka.com):ಮಾಣಿಲ ಗ್ರಾಮದ ಮುಖ್ಯ ರಸ್ತೆಗಳಲ್ಲೊಂದು ಮುರುವ ಕೊಮ್ಮುಂಜೆ ಕೂಟೇಲು. ಸುಮಾರು ಇನ್ನೂರೈವತ್ತು ಮನೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಮೂರು ಅಂಗನವಾಡಿಗಳು, ಆಂಚೆ ಕಚೀರಿ, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಕರ್ನಾಟಕ ಬ್ಯಾಂಕ್ ಗ್ರಂಥಾಲಯ, ಗ್ರಾಮ ಆಡಳಿತಾಧಿಕಾರಿ ಕಛೇರಿ ಮುಂತಾದವು ಈ ರಸ್ತೆಗೆ ಹೊಂದಿಕೊಂಡಿವೆ. ಪ್ರತಿದಿನ ಹತ್ತಾರು ವಾಹನಗಳು,
ಶಾಲಾ ವಿದ್ಯಾರ್ಥಿಗಳು, ನಗರಕ್ಕೆ ಉದ್ಯೋಗ ಕ್ಕೆ, ಮತ್ತು ಅನ್ಯಕೆಲಸಗಳಿಗೆ, ಆಸ್ಪತ್ರೆಗೆ ತೆರಳುವ ಮಂದಿ ಈ ರಸ್ತೆಯನ್ನೇ ಅವಲಂಬಿಸಬೇಕಾಗಿದೆ.


ಸುಮಾರು ಐದು ಕಿ.ಮೀ.ಇರುವ ಈ ರಸ್ತೆಯು ಮೂರು ಕಿ.ಮೀ.ಯಷ್ಟು ಹಂತ ಹಂತವಾಗಿ ಡಾಮರೀಕರಣಗೊಂಡಿದೆ. ಮುರುವ ರಿಂದ ಅರಳತ್ತಡ್ಕ ದ ಸುಮಾರು ಒಂದೂವರೆ ಕಿ.ಮೀ.ವರೇಗೆ 2019=20ರಲ್ಲಿ MPLAD ಅನುದಾನದ 8 ಲಕ್ಷದಲ್ಲಿ ಪುನಃ ತೇಪೆ ಹಚ್ಚುವ ಕೆಲಸ ಜರುಗಿತ್ತು. ಈಗ ಈ ಭಾಗದ ರಸ್ತೆಯು ಸಂಪೂರ್ಣ ಹೊಂಡ ಗುಂಡಿ ಬಿದ್ದು ನಾದುರಸ್ತಿಯಲ್ಲಿದೆ. ವಾಹನ ಸವಾರರು, ಪಾದಚಾರಿಗಳು, ವಿದ್ಯಾರ್ಥಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲವಂತೂ ಅಸಹನೀಯವೆನಿಸಿದೆ. ಜನಪ್ರತಿನಿಧಿಗಳು ಇತ್ತು ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು