10:10 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಗುಂಡಿ ಬಿದ್ದ ಮುರುವ- ಅರಳತ್ತಡ್ಕ ರಸ್ತೆ: ಸಂಕಷ್ಟದಲ್ಲಿ ಪಾದಚಾರಿಗಳು, ವಾಹನ ಸವಾರರು

05/08/2023, 23:16

ಬಂಟ್ವಾಳ(reporterkarnataka.com):ಮಾಣಿಲ ಗ್ರಾಮದ ಮುಖ್ಯ ರಸ್ತೆಗಳಲ್ಲೊಂದು ಮುರುವ ಕೊಮ್ಮುಂಜೆ ಕೂಟೇಲು. ಸುಮಾರು ಇನ್ನೂರೈವತ್ತು ಮನೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಮೂರು ಅಂಗನವಾಡಿಗಳು, ಆಂಚೆ ಕಚೀರಿ, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಕರ್ನಾಟಕ ಬ್ಯಾಂಕ್ ಗ್ರಂಥಾಲಯ, ಗ್ರಾಮ ಆಡಳಿತಾಧಿಕಾರಿ ಕಛೇರಿ ಮುಂತಾದವು ಈ ರಸ್ತೆಗೆ ಹೊಂದಿಕೊಂಡಿವೆ. ಪ್ರತಿದಿನ ಹತ್ತಾರು ವಾಹನಗಳು,
ಶಾಲಾ ವಿದ್ಯಾರ್ಥಿಗಳು, ನಗರಕ್ಕೆ ಉದ್ಯೋಗ ಕ್ಕೆ, ಮತ್ತು ಅನ್ಯಕೆಲಸಗಳಿಗೆ, ಆಸ್ಪತ್ರೆಗೆ ತೆರಳುವ ಮಂದಿ ಈ ರಸ್ತೆಯನ್ನೇ ಅವಲಂಬಿಸಬೇಕಾಗಿದೆ.


ಸುಮಾರು ಐದು ಕಿ.ಮೀ.ಇರುವ ಈ ರಸ್ತೆಯು ಮೂರು ಕಿ.ಮೀ.ಯಷ್ಟು ಹಂತ ಹಂತವಾಗಿ ಡಾಮರೀಕರಣಗೊಂಡಿದೆ. ಮುರುವ ರಿಂದ ಅರಳತ್ತಡ್ಕ ದ ಸುಮಾರು ಒಂದೂವರೆ ಕಿ.ಮೀ.ವರೇಗೆ 2019=20ರಲ್ಲಿ MPLAD ಅನುದಾನದ 8 ಲಕ್ಷದಲ್ಲಿ ಪುನಃ ತೇಪೆ ಹಚ್ಚುವ ಕೆಲಸ ಜರುಗಿತ್ತು. ಈಗ ಈ ಭಾಗದ ರಸ್ತೆಯು ಸಂಪೂರ್ಣ ಹೊಂಡ ಗುಂಡಿ ಬಿದ್ದು ನಾದುರಸ್ತಿಯಲ್ಲಿದೆ. ವಾಹನ ಸವಾರರು, ಪಾದಚಾರಿಗಳು, ವಿದ್ಯಾರ್ಥಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲವಂತೂ ಅಸಹನೀಯವೆನಿಸಿದೆ. ಜನಪ್ರತಿನಿಧಿಗಳು ಇತ್ತು ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು