4:39 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಗುಂಡಿ ಬಿದ್ದ ಮುರುವ- ಅರಳತ್ತಡ್ಕ ರಸ್ತೆ: ಸಂಕಷ್ಟದಲ್ಲಿ ಪಾದಚಾರಿಗಳು, ವಾಹನ ಸವಾರರು

05/08/2023, 23:16

ಬಂಟ್ವಾಳ(reporterkarnataka.com):ಮಾಣಿಲ ಗ್ರಾಮದ ಮುಖ್ಯ ರಸ್ತೆಗಳಲ್ಲೊಂದು ಮುರುವ ಕೊಮ್ಮುಂಜೆ ಕೂಟೇಲು. ಸುಮಾರು ಇನ್ನೂರೈವತ್ತು ಮನೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಮೂರು ಅಂಗನವಾಡಿಗಳು, ಆಂಚೆ ಕಚೀರಿ, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಕರ್ನಾಟಕ ಬ್ಯಾಂಕ್ ಗ್ರಂಥಾಲಯ, ಗ್ರಾಮ ಆಡಳಿತಾಧಿಕಾರಿ ಕಛೇರಿ ಮುಂತಾದವು ಈ ರಸ್ತೆಗೆ ಹೊಂದಿಕೊಂಡಿವೆ. ಪ್ರತಿದಿನ ಹತ್ತಾರು ವಾಹನಗಳು,
ಶಾಲಾ ವಿದ್ಯಾರ್ಥಿಗಳು, ನಗರಕ್ಕೆ ಉದ್ಯೋಗ ಕ್ಕೆ, ಮತ್ತು ಅನ್ಯಕೆಲಸಗಳಿಗೆ, ಆಸ್ಪತ್ರೆಗೆ ತೆರಳುವ ಮಂದಿ ಈ ರಸ್ತೆಯನ್ನೇ ಅವಲಂಬಿಸಬೇಕಾಗಿದೆ.


ಸುಮಾರು ಐದು ಕಿ.ಮೀ.ಇರುವ ಈ ರಸ್ತೆಯು ಮೂರು ಕಿ.ಮೀ.ಯಷ್ಟು ಹಂತ ಹಂತವಾಗಿ ಡಾಮರೀಕರಣಗೊಂಡಿದೆ. ಮುರುವ ರಿಂದ ಅರಳತ್ತಡ್ಕ ದ ಸುಮಾರು ಒಂದೂವರೆ ಕಿ.ಮೀ.ವರೇಗೆ 2019=20ರಲ್ಲಿ MPLAD ಅನುದಾನದ 8 ಲಕ್ಷದಲ್ಲಿ ಪುನಃ ತೇಪೆ ಹಚ್ಚುವ ಕೆಲಸ ಜರುಗಿತ್ತು. ಈಗ ಈ ಭಾಗದ ರಸ್ತೆಯು ಸಂಪೂರ್ಣ ಹೊಂಡ ಗುಂಡಿ ಬಿದ್ದು ನಾದುರಸ್ತಿಯಲ್ಲಿದೆ. ವಾಹನ ಸವಾರರು, ಪಾದಚಾರಿಗಳು, ವಿದ್ಯಾರ್ಥಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲವಂತೂ ಅಸಹನೀಯವೆನಿಸಿದೆ. ಜನಪ್ರತಿನಿಧಿಗಳು ಇತ್ತು ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು