12:51 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಗುಂಡ್ಲುಪೇಟೆ: ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ: ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶ

25/06/2022, 09:21

ಮೈಸೂರು(reporterkarnataka.com): ಗುಂಡ್ಲುಪೇಟೆ ಸಮೀಪ ನಕಲಿ ರಸಗೊಬ್ಬರ ಹಾಗೂ ಔಷಧ  ತಯಾರಿಕಾ ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಗಡಿಯಲ್ಲಿರುವ.ಹಿರೀಕಾಟಿ ಗ್ರಾಮದ ಖಾಸಗಿ ಜಮೀನಿನಲ್ಲಿ ತಯಾರಿಸುತ್ತಿದ್ದ ನಕಲಿ ರಸಗೊಬ್ಬರ ಮತ್ತು ಕೃಷಿ ಔಷಧ ಬಗ್ಗೆ ನಿಖರ ಮಾಹಿತಿ ಪಡೆದ ನಂಜನಗೂಡು ಹಾಗೂ ಮೈಸೂರಿನ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ

ನಡೆದ ವೇಳೆ ಸ್ಥಳದಲ್ಲಿದ್ದ ಸಿಬ್ಬಂದಿಗಳು ಹಾಗೂ ಮಾಲೀಕ ಪರಾರಿಯಾಗಿದ್ದಾರೆ. ನೂರಾರು ಟನ್ ಗಳ ನಕಲಿ ರಸಗೊಬ್ಬರ, ಪೀಠೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜು ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ. ಮಣ್ಣಿಗೆ ಗೊಬ್ಬರದ ಬಣ್ಣ ಮಿಶ್ರಣ ಮಾಡಿ ಹೆಸರಾಂತ ಕಂಪನಿಯ ಬ್ಯಾಗ್ ಗಳಲ್ಲಿ ತುಂಬಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ನಕಲಿ ಗೊಬ್ಬರ ಸರಬರಾಜಾಗುತ್ತಿದ್ದು ಅಮಾಯಕ ರೈತರು ವಂಚನೆಗೆ ಒಳಗಾಗುತ್ತಿದ್ದ ದೂರುಗಳು ಕೃಷಿ ಇಲಾಖೆಗೆ ಬಂದಿತ್ತು.ಈ ಹಿನ್ನಲೆ ಕಾರ್ಯೋನ್ಮುಖರಾದ ನಂಜನಗೂಡು ಹಾಗೂ ಮೈಸೂರು ಕೃಷಿ ಇಲಾಖೆ ಅಧಿಕಾರಿಗಳು ಜಂಟಿ

ಕಾರ್ಯಾಚರಣೆ ನಡೆಸಿ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ.ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ. ನಕಲಿ ರಸಗೊಬ್ಬರ ತಯಾರಿಸುತ್ತಿದ್ದ ಖದೀಮರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಮೈಸೂರಿನ ಕೃಷಿ ಇಲಾಖೆಯ ಉಪನಿರ್ದೇಶಕ

ರಾಜು ಹಾಗೂ ನಂಜನಗೂಡು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು