5:28 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಗುಂಡ್ಲುಪೇಟೆ: ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ: ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶ

25/06/2022, 09:21

ಮೈಸೂರು(reporterkarnataka.com): ಗುಂಡ್ಲುಪೇಟೆ ಸಮೀಪ ನಕಲಿ ರಸಗೊಬ್ಬರ ಹಾಗೂ ಔಷಧ  ತಯಾರಿಕಾ ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಗಡಿಯಲ್ಲಿರುವ.ಹಿರೀಕಾಟಿ ಗ್ರಾಮದ ಖಾಸಗಿ ಜಮೀನಿನಲ್ಲಿ ತಯಾರಿಸುತ್ತಿದ್ದ ನಕಲಿ ರಸಗೊಬ್ಬರ ಮತ್ತು ಕೃಷಿ ಔಷಧ ಬಗ್ಗೆ ನಿಖರ ಮಾಹಿತಿ ಪಡೆದ ನಂಜನಗೂಡು ಹಾಗೂ ಮೈಸೂರಿನ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ

ನಡೆದ ವೇಳೆ ಸ್ಥಳದಲ್ಲಿದ್ದ ಸಿಬ್ಬಂದಿಗಳು ಹಾಗೂ ಮಾಲೀಕ ಪರಾರಿಯಾಗಿದ್ದಾರೆ. ನೂರಾರು ಟನ್ ಗಳ ನಕಲಿ ರಸಗೊಬ್ಬರ, ಪೀಠೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜು ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ. ಮಣ್ಣಿಗೆ ಗೊಬ್ಬರದ ಬಣ್ಣ ಮಿಶ್ರಣ ಮಾಡಿ ಹೆಸರಾಂತ ಕಂಪನಿಯ ಬ್ಯಾಗ್ ಗಳಲ್ಲಿ ತುಂಬಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ನಕಲಿ ಗೊಬ್ಬರ ಸರಬರಾಜಾಗುತ್ತಿದ್ದು ಅಮಾಯಕ ರೈತರು ವಂಚನೆಗೆ ಒಳಗಾಗುತ್ತಿದ್ದ ದೂರುಗಳು ಕೃಷಿ ಇಲಾಖೆಗೆ ಬಂದಿತ್ತು.ಈ ಹಿನ್ನಲೆ ಕಾರ್ಯೋನ್ಮುಖರಾದ ನಂಜನಗೂಡು ಹಾಗೂ ಮೈಸೂರು ಕೃಷಿ ಇಲಾಖೆ ಅಧಿಕಾರಿಗಳು ಜಂಟಿ

ಕಾರ್ಯಾಚರಣೆ ನಡೆಸಿ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ.ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ. ನಕಲಿ ರಸಗೊಬ್ಬರ ತಯಾರಿಸುತ್ತಿದ್ದ ಖದೀಮರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಮೈಸೂರಿನ ಕೃಷಿ ಇಲಾಖೆಯ ಉಪನಿರ್ದೇಶಕ

ರಾಜು ಹಾಗೂ ನಂಜನಗೂಡು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು