10:36 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಗುಂಡ್ಲುಪೇಟೆ: ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ: ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶ

25/06/2022, 09:21

ಮೈಸೂರು(reporterkarnataka.com): ಗುಂಡ್ಲುಪೇಟೆ ಸಮೀಪ ನಕಲಿ ರಸಗೊಬ್ಬರ ಹಾಗೂ ಔಷಧ  ತಯಾರಿಕಾ ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಗಡಿಯಲ್ಲಿರುವ.ಹಿರೀಕಾಟಿ ಗ್ರಾಮದ ಖಾಸಗಿ ಜಮೀನಿನಲ್ಲಿ ತಯಾರಿಸುತ್ತಿದ್ದ ನಕಲಿ ರಸಗೊಬ್ಬರ ಮತ್ತು ಕೃಷಿ ಔಷಧ ಬಗ್ಗೆ ನಿಖರ ಮಾಹಿತಿ ಪಡೆದ ನಂಜನಗೂಡು ಹಾಗೂ ಮೈಸೂರಿನ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ

ನಡೆದ ವೇಳೆ ಸ್ಥಳದಲ್ಲಿದ್ದ ಸಿಬ್ಬಂದಿಗಳು ಹಾಗೂ ಮಾಲೀಕ ಪರಾರಿಯಾಗಿದ್ದಾರೆ. ನೂರಾರು ಟನ್ ಗಳ ನಕಲಿ ರಸಗೊಬ್ಬರ, ಪೀಠೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜು ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ. ಮಣ್ಣಿಗೆ ಗೊಬ್ಬರದ ಬಣ್ಣ ಮಿಶ್ರಣ ಮಾಡಿ ಹೆಸರಾಂತ ಕಂಪನಿಯ ಬ್ಯಾಗ್ ಗಳಲ್ಲಿ ತುಂಬಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ನಕಲಿ ಗೊಬ್ಬರ ಸರಬರಾಜಾಗುತ್ತಿದ್ದು ಅಮಾಯಕ ರೈತರು ವಂಚನೆಗೆ ಒಳಗಾಗುತ್ತಿದ್ದ ದೂರುಗಳು ಕೃಷಿ ಇಲಾಖೆಗೆ ಬಂದಿತ್ತು.ಈ ಹಿನ್ನಲೆ ಕಾರ್ಯೋನ್ಮುಖರಾದ ನಂಜನಗೂಡು ಹಾಗೂ ಮೈಸೂರು ಕೃಷಿ ಇಲಾಖೆ ಅಧಿಕಾರಿಗಳು ಜಂಟಿ

ಕಾರ್ಯಾಚರಣೆ ನಡೆಸಿ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ.ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ. ನಕಲಿ ರಸಗೊಬ್ಬರ ತಯಾರಿಸುತ್ತಿದ್ದ ಖದೀಮರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಮೈಸೂರಿನ ಕೃಷಿ ಇಲಾಖೆಯ ಉಪನಿರ್ದೇಶಕ

ರಾಜು ಹಾಗೂ ನಂಜನಗೂಡು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು