5:10 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗುಂಡ್ಲುಪೇಟೆ: ನಕಲಿ ರಸಗೊಬ್ಬರ ತಯಾರಿಕಾ ಘಟಕದ ಮೇಲೆ ಅಧಿಕಾರಿಗಳ ದಾಳಿ: ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶ

25/06/2022, 09:21

ಮೈಸೂರು(reporterkarnataka.com): ಗುಂಡ್ಲುಪೇಟೆ ಸಮೀಪ ನಕಲಿ ರಸಗೊಬ್ಬರ ಹಾಗೂ ಔಷಧ  ತಯಾರಿಕಾ ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಪಡಿಸಿಕೊಂಡಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಗಡಿಯಲ್ಲಿರುವ.ಹಿರೀಕಾಟಿ ಗ್ರಾಮದ ಖಾಸಗಿ ಜಮೀನಿನಲ್ಲಿ ತಯಾರಿಸುತ್ತಿದ್ದ ನಕಲಿ ರಸಗೊಬ್ಬರ ಮತ್ತು ಕೃಷಿ ಔಷಧ ಬಗ್ಗೆ ನಿಖರ ಮಾಹಿತಿ ಪಡೆದ ನಂಜನಗೂಡು ಹಾಗೂ ಮೈಸೂರಿನ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ

ನಡೆದ ವೇಳೆ ಸ್ಥಳದಲ್ಲಿದ್ದ ಸಿಬ್ಬಂದಿಗಳು ಹಾಗೂ ಮಾಲೀಕ ಪರಾರಿಯಾಗಿದ್ದಾರೆ. ನೂರಾರು ಟನ್ ಗಳ ನಕಲಿ ರಸಗೊಬ್ಬರ, ಪೀಠೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಜು ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಅಧಿಕಾರಿಗಳು ಕಾರ್ಯಾಚರಣೆ ಮಾಡಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ. ಮಣ್ಣಿಗೆ ಗೊಬ್ಬರದ ಬಣ್ಣ ಮಿಶ್ರಣ ಮಾಡಿ ಹೆಸರಾಂತ ಕಂಪನಿಯ ಬ್ಯಾಗ್ ಗಳಲ್ಲಿ ತುಂಬಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಹಲವು ದಿನಗಳಿಂದ ಮಾರುಕಟ್ಟೆಯಲ್ಲಿ ನಕಲಿ ಗೊಬ್ಬರ ಸರಬರಾಜಾಗುತ್ತಿದ್ದು ಅಮಾಯಕ ರೈತರು ವಂಚನೆಗೆ ಒಳಗಾಗುತ್ತಿದ್ದ ದೂರುಗಳು ಕೃಷಿ ಇಲಾಖೆಗೆ ಬಂದಿತ್ತು.ಈ ಹಿನ್ನಲೆ ಕಾರ್ಯೋನ್ಮುಖರಾದ ನಂಜನಗೂಡು ಹಾಗೂ ಮೈಸೂರು ಕೃಷಿ ಇಲಾಖೆ ಅಧಿಕಾರಿಗಳು ಜಂಟಿ

ಕಾರ್ಯಾಚರಣೆ ನಡೆಸಿ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ್ದಾರೆ.ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ. ನಕಲಿ ರಸಗೊಬ್ಬರ ತಯಾರಿಸುತ್ತಿದ್ದ ಖದೀಮರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ಮೈಸೂರಿನ ಕೃಷಿ ಇಲಾಖೆಯ ಉಪನಿರ್ದೇಶಕ

ರಾಜು ಹಾಗೂ ನಂಜನಗೂಡು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು