4:31 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಗುಪ್ತಚರ ಇಲಾಖೆ ಸಿಬ್ಬಂದಿ ಹೃದಯಾಘಾತಕ್ಕೆ ಬಲಿ: ಕರ್ತವ್ಯದಲ್ಲಿದ್ದಾಗಲೇ ಕಾಣಿಸಿಕೊಂಡ ಎದೆನೋವು

16/09/2023, 21:14

ಮಂಗಳೂರು(reporterkarnataka.com): ಕರ್ತವ್ಯದಲ್ಲಿದ್ದ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರ ನಡೆದಿದೆ.
ನಗರದ ಉರ್ವ ಮಾರಿಗುಡಿ ನಿವಾಸಿಯಾದ ರಾಜೇಶ್ ಬಿ.ಯು. (53) ಅವರಿಗೆ ಶನಿವಾರ ಮಧ್ಯಾಹ್ನ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಮ ಪಡೆಯುತ್ತಿದ್ದಂತೆ ಅವರು ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಕೊನೆಯುಸಿರೆಳೆದರು.
ರಾಜೇಶ್ ಅವರು 1993ನೇ ಬ್ಯಾಚ್ ಗೆ ಸೇರಿದವರು. ನಿವೃತ್ತಿಗೆ ಇನ್ನೂ 7 ವರ್ಷಗಳ ಕಾಲ ಇತ್ತು.
ಅವರು ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು