9:30 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರವೇ ನಮಃ

05/09/2022, 12:37

“ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ” ಎಂಬ ದಾಸರ ಹಾಡಿನ ಸಾಲಿನಂತೆ ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಪಾತ್ರ ಮಹತ್ತರವಾದದ್ದು. ಶಿಲೆಯಂತಿದ್ದ ಮಗುವನ್ನು ಸುಂದರ ಶಿಲ್ಪವನ್ನಾಗಿಸುವವನೇ ಶಿಕ್ಷಕ. “ವ್ಯಕ್ತಿಯ ಜೀವನದಲ್ಲಿ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು”, ಜೀವನದಲ್ಲಿ ಗುರಿಯನ್ನು ಸರಿಯಾದ ರೀತಿಯಲ್ಲಿ ತಲುಪಲು, ಸುಂದರವಾದ ಭವಿಷ್ಯವನ್ನು ರೂಪಿಸಲು ಗುರುವಿನ ಪಾತ್ರ ಪ್ರಮುಖವಾದದ್ದು.

ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕರು ಒಂದಲ್ಲ ಒಂದು ರೀತಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ. ಬದುಕಿನಲ್ಲಿ ಶಿಕ್ಷಕರ ಪ್ರತಿಯೊಂದು ನಡೆ ನುಡಿ, ಕಾರ್ಯಗಳು ವಿದ್ಯಾರ್ಥಿಗಳ ಪಾಲಿಗೆ ಮಾರ್ಗದರ್ಶನೀಯವಾಗಿದೆ. ಪ್ರತಿ ವರ್ಷ ಸೆಪ್ಟೆಂಬರ್ 5 ಬಂತೆಂದರೆ ಎಲ್ಲರೂ ಒಮ್ಮೆ ತಮ್ಮ ಜೀವನವನ್ನು ರೂಪಿಸಿದ ಶಿಕ್ಷಕರನ್ನು ನೆನೆಯುವಂತಹ ದಿನ .
ಸೆಪ್ಟೆಂಬರ್ 5 ನ್ನು ಭಾರತದ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ನೆನಪಿಗಾಗಿ ಆಚರಿಸುತ್ತೇವೆ. ರಾಧಾಕೃಷ್ಣನ್ ರವರು ಶಿಕ್ಷಕರಾಗಿದ್ದುಕೊಂಡು ಭಾರತ ದೇಶದ ರಾಷ್ಟ್ರಪತಿ ಹುದ್ದೆಯಲ್ಲಿ ವಿರಾಜಮಾನರಾದವರು . ಒಬ್ಬ ಶಿಕ್ಷಕ ಮನಸ್ಸು ಮಾಡಿದ್ದಲ್ಲಿ ರಾಷ್ಟ್ರದ ಉನ್ನತ ಹುದ್ದೆಗೆರಬಹುದು ಎಂಬುದಕ್ಕೆ ರಾಧಾಕೃಷ್ಣನ್ ರವರೇ ಸಾಕ್ಷಿ .

ಸರಳತೆ ,ಸಜ್ಜನಿಕೆ , ಕಾರ್ಯನಿಷ್ಠತೆ ವೃತ್ತಿ ಬದ್ಧತೆ, ಜ್ಞಾನದ ಗಣಿಯಂತಿರುವ ರಾಧಾಕೃಷ್ಣನ್ ರವರ ಜೀವನ ಇಂದಿನ ಎಲ್ಲರಿಗೂ ಆದರ್ಶ ಪ್ರಾಯವಾಗಿದೆ. ಶಿಕ್ಷಕ ವೃತ್ತಿಯನ್ನು ಕಾಯ, ವಾಚ, ಮನಸಾ ಶ್ರದ್ಧೆಯಿಂದ, ಸೇವಾ ಮನೋಭಾವನೆಯಿಂದ ಮಾಡಿ ಮಕ್ಕಳ ಭವಿಷ್ಯವನ್ನು ರೂಪಿಸಿ,
ಭವ್ಯ ಭಾರತದ ನಿರ್ಮಾಣ ಮಾಡುವುದು ಎಲ್ಲಾ ಶಿಕ್ಷಕರ ಜವಾಬ್ದಾರಿಯಾಗಿದೆ..

ಎಲ್ಲರಿಗೂ ಶಿಕ್ಷಕ ದಿನಾಚರಣೆಯ ಶುಭಾಶಯಗಳು

ಇತ್ತೀಚಿನ ಸುದ್ದಿ

ಜಾಹೀರಾತು