2:00 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರವೇ ನಮಃ

05/09/2022, 12:37

“ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ” ಎಂಬ ದಾಸರ ಹಾಡಿನ ಸಾಲಿನಂತೆ ಪ್ರತಿಯೊಬ್ಬರ ಜೀವನದಲ್ಲಿ ಗುರುವಿನ ಪಾತ್ರ ಮಹತ್ತರವಾದದ್ದು. ಶಿಲೆಯಂತಿದ್ದ ಮಗುವನ್ನು ಸುಂದರ ಶಿಲ್ಪವನ್ನಾಗಿಸುವವನೇ ಶಿಕ್ಷಕ. “ವ್ಯಕ್ತಿಯ ಜೀವನದಲ್ಲಿ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು”, ಜೀವನದಲ್ಲಿ ಗುರಿಯನ್ನು ಸರಿಯಾದ ರೀತಿಯಲ್ಲಿ ತಲುಪಲು, ಸುಂದರವಾದ ಭವಿಷ್ಯವನ್ನು ರೂಪಿಸಲು ಗುರುವಿನ ಪಾತ್ರ ಪ್ರಮುಖವಾದದ್ದು.

ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಕರು ಒಂದಲ್ಲ ಒಂದು ರೀತಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ. ಬದುಕಿನಲ್ಲಿ ಶಿಕ್ಷಕರ ಪ್ರತಿಯೊಂದು ನಡೆ ನುಡಿ, ಕಾರ್ಯಗಳು ವಿದ್ಯಾರ್ಥಿಗಳ ಪಾಲಿಗೆ ಮಾರ್ಗದರ್ಶನೀಯವಾಗಿದೆ. ಪ್ರತಿ ವರ್ಷ ಸೆಪ್ಟೆಂಬರ್ 5 ಬಂತೆಂದರೆ ಎಲ್ಲರೂ ಒಮ್ಮೆ ತಮ್ಮ ಜೀವನವನ್ನು ರೂಪಿಸಿದ ಶಿಕ್ಷಕರನ್ನು ನೆನೆಯುವಂತಹ ದಿನ .
ಸೆಪ್ಟೆಂಬರ್ 5 ನ್ನು ಭಾರತದ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ನೆನಪಿಗಾಗಿ ಆಚರಿಸುತ್ತೇವೆ. ರಾಧಾಕೃಷ್ಣನ್ ರವರು ಶಿಕ್ಷಕರಾಗಿದ್ದುಕೊಂಡು ಭಾರತ ದೇಶದ ರಾಷ್ಟ್ರಪತಿ ಹುದ್ದೆಯಲ್ಲಿ ವಿರಾಜಮಾನರಾದವರು . ಒಬ್ಬ ಶಿಕ್ಷಕ ಮನಸ್ಸು ಮಾಡಿದ್ದಲ್ಲಿ ರಾಷ್ಟ್ರದ ಉನ್ನತ ಹುದ್ದೆಗೆರಬಹುದು ಎಂಬುದಕ್ಕೆ ರಾಧಾಕೃಷ್ಣನ್ ರವರೇ ಸಾಕ್ಷಿ .

ಸರಳತೆ ,ಸಜ್ಜನಿಕೆ , ಕಾರ್ಯನಿಷ್ಠತೆ ವೃತ್ತಿ ಬದ್ಧತೆ, ಜ್ಞಾನದ ಗಣಿಯಂತಿರುವ ರಾಧಾಕೃಷ್ಣನ್ ರವರ ಜೀವನ ಇಂದಿನ ಎಲ್ಲರಿಗೂ ಆದರ್ಶ ಪ್ರಾಯವಾಗಿದೆ. ಶಿಕ್ಷಕ ವೃತ್ತಿಯನ್ನು ಕಾಯ, ವಾಚ, ಮನಸಾ ಶ್ರದ್ಧೆಯಿಂದ, ಸೇವಾ ಮನೋಭಾವನೆಯಿಂದ ಮಾಡಿ ಮಕ್ಕಳ ಭವಿಷ್ಯವನ್ನು ರೂಪಿಸಿ,
ಭವ್ಯ ಭಾರತದ ನಿರ್ಮಾಣ ಮಾಡುವುದು ಎಲ್ಲಾ ಶಿಕ್ಷಕರ ಜವಾಬ್ದಾರಿಯಾಗಿದೆ..

ಎಲ್ಲರಿಗೂ ಶಿಕ್ಷಕ ದಿನಾಚರಣೆಯ ಶುಭಾಶಯಗಳು

ಇತ್ತೀಚಿನ ಸುದ್ದಿ

ಜಾಹೀರಾತು