4:24 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಗುರು ಪರಂಪರೆಗೆ ಪ್ರಸಿದ್ಧವಾದ ಮಖಣಾಪುರದ ಶ್ರೀ ಸಿದ್ದಜ್ಯೋತಿ ಆಶ್ರಮ: ಭಕ್ತರಿಗೆ ಸಿಗಲಿದೆ ಅನ್ನ ದಾಸೋಹ

06/10/2021, 16:29

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಸಿದ್ದಜ್ಯೋತಿ ಮಠದ ಸ್ವಾಮಿಗಳ ಸೇವಾ ಸಮಿತಿ ಸಹಯೋಗದಲ್ಲಿ ನಡೆಯುವ ಶ್ರೀ ಸಿದ್ಧಲಿಂಗ ಆಶ್ರಮವು ಅನ್ನದಾಸೋಹಕ್ಕೆ ಇಡೀ ಉತ್ತರ ಕರ್ನಾಟಕದಲ್ಲೇ ಪ್ರಸಿದ್ಧಿ ಪಡೆದಿದೆ. ಆಶ್ರಮದ ಗುರುಗಳಾದ ಶ್ರೀ ದೇವೇಂದ್ರ ಒಡೆಯರ್ ಅವರು ಭಕ್ತಾದಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಆಶ್ರಮದಲ್ಲಿ ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ. 

ಈ ಆಶ್ರಮವು 1700 ಮಠ ಮುನಿಗಳನ್ನು ಹೊಂದಿದ ಭವ್ಯ ಪರಂಪರೆಯಿಂದ ಬಂದಿದೆ. ಇದೀಗ ಗುರುಗಳು ಇಲ್ಲಿನ ಅನ್ನದಾಸೋಹದ ಮುಂದಾಳತ್ವ ವಹಿಸಿದ್ದಾರೆ. ಆರೋಗ್ಯ ಭಾಗ್ಯ, ಸಂತಾನ ಭಾಗ್ಯಕ್ಕಾಗಿ ಉತ್ತರ ಕರ್ನಾಟಕ ಹಾಗೂ ನೆರೆಯ ಆಂಧ್ರ ಪ್ರದೇಶದಿಂದ ಸಾವಿರಾರು ಭಕ್ತರು ಇಲ್ಲಿಗೆ ಹರಕೆ ಹೊತ್ತುಕೊಳ್ಳುತ್ತಾರೆ. ಗುರುಗಳು ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಭಕ್ತರ ಉದ್ದಾರದಲ್ಲಿ ನಿರತರಾಗಿದ್ದಾರೆ.

ಇದರೊಂದಿಗೆ 4 ಎಕರೆ ಜಾಗದಲ್ಲಿ 108 ಅಡಿ ಎತ್ತರದ ಶಿವಲಿಂಗ ನಿರ್ಮಾಣದ ಸಂಕಲ್ಪವನ್ನು ಗುರುಗಳು ಕೈಗೊಂಡಿದ್ದಾರೆ. ಇದರ ಜತೆ ವೃದ್ದಾಶ್ರಮವೂ ತಲೆ ಎತ್ತಲಿದೆ. ಈ ಮಹಾನ್ ಕಾರ್ಯಕ್ಕೆ ಆಶ್ರಮದ ಸದಸ್ಯರು ಹಾಗು ಸುತ್ತಮುತ್ತಲಿನ ಗ್ರಾಮದ ಭಕ್ತರು, ರಾಜ್ಯ ಮತ್ತು ದೇಶದ ಮೂಲೆ ಮೂಲೆಯ ಶಿವಭಕ್ತರು ನೆರವಿನ ಹಸ್ತದೊಂದಿಗೆ ಪಾಲ್ಗೊಳ್ಳುವ ಅಗತ್ಯವಿದೆ. ಭಕ್ತರು ಈ ಬೃಹತ್  ಶಿವಲಿಂಗ ನಿರ್ಮಾಣ ಕಾರ್ಯದಲ್ಲಿ ತನು- ಮನ- ಧನದಿಂದ ಸಹಾಯ ಮಾಡಿ ಪುನಿತರಾಗಬೇಕು ಎಂದು ಆಶ್ರಮದ ಗುರುಗಳು ಹಾಗೂ ಸದಸ್ಯರು ವಿನಂತಿಸಿಕೊಂಡಿದ್ದಾರೆ.

ಶಿವಲಿಂಗ ನಿರ್ಮಾಣದ ಜತೆಗೆ ಅಸಹಾಯಕ, ನಿರ್ಗತಿಕ ವೃದ್ಧರಿಗೆ ಸಹಾಯವಾಗುವ ನಿಟ್ಟಿನಲ್ಲಿ ವೃದ್ದಾಶ್ರಮ ನಿರ್ಮಾಣ ಮಾಡುವ ಸಂಕಲ್ಪ ಕೂಡ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು