12:16 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಗುರುಪುರ ಅಡ್ಡೂರು: ಅಕ್ರಮ ಮರಳುಗಾರಿಕೆಗೆ ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

07/11/2024, 20:12

ಮಂಗಳೂರು(reporterkarnataka.com): ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ನೀರಿನಲ್ಲಿ ಮುಳುಗಿಸಿಟ್ಟಿದ್ದ ದೋಣಿಗಳನ್ನು ವಶಪಡಿಸಿದ್ದಾರೆ.


ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು. ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.
ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು