5:00 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಗುರುಪುರ ಕೈಕಂಬ: ಇಂದಿನಿಂದ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ; ಸಮಾರೋಪಕ್ಕೆ ಮಾಜಿ ಸಚಿವೆ ಶೈಲಜಾ ಟೀಚರ್

22/11/2021, 09:33

ಮಂಗಳೂರು(reporterkarnataka.com): ಸಿಪಿಎಂ ಪಕ್ಷದ ಎರಡು ದಿನಗಳ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವಂಬರ್ 22, 23 ರಂದು ಗುರುಪುರ ಕೈಕಂಬದ ಪ್ರಿಮೀಯರ್ ಸಭಾಂಗಣದ ವೇದಿಕೆಯಲ್ಲಿ ನಡೆಯಲಿದೆ.

ಪ್ರಸಕ್ತ ರಾಜಕೀಯ, ಸಾಮಾಜಿಕ ವಿದ್ಯಮಾನ, ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮ್ಮೇಳನ ಚರ್ಚಿಸಲಿದೆ. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಗಳು ಹೆಚ್ಚು ಹೆಚ್ಚು ವ್ಯಾಪಾರೀಕರಣ ಗೊಳ್ಳುತ್ತಿರುವುರಿಂದ ಉಂಟಾಗಿರುವ ಬಿಕ್ಕಟ್ಟು, ಆಳಗೊಳ್ಳುತ್ತಿರುವ ರೈತ, ಕಾರ್ಮಿಕರ ಬವಣೆಗಳು, ತೀವ್ರಗೊಳ್ಳುತ್ತಿರುವ ನಿರುದ್ಯೋಗದ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದೆ ನಡೆಸಬೇಕಾಗಿರುವ ಹೋರಾಟಗಳ ರೂಪುರೇಷೆಗಳ ಕುರಿತಾದ ನಿರ್ಣಯಗಳು ಸಮ್ಮೇಳನದಲ್ಲಿ ಚರ್ಚೆಗೊಳಗಾಗಲಿವೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಯ್ಕೆಯಾದ 180 ಸಂಗಾತಿಗಳು ಪ್ರತಿನಿಧಿಗಳಾಗಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 

ನವಂಬರ್ 22 ರ ಬೆಳಿಗ್ಗೆ 10. 30ಕ್ಕೆ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜು ಸಮ್ಮೇಳನ

ಉದ್ಘಾಟಿಸಲಿದ್ದಾರೆ‌. ಹಿರಿಯ ಕಾರ್ಮಿಕ ನಾಯಕ ಯು. ಬಿ. ಲೋಕಯ್ಯ ಧ್ವಜಾರೋಹಣದ ಮೂಲಕ ಸಮ್ಮೇಳನದ ಪ್ರಕ್ರಿಯೆಗಳಿಗೆ ಚಾಲನೆ ನೀಡಲಿದ್ದಾರೆ. ನವಂಬರ್ 23 ರ ಸಂಜೆ 3. 00 ಗಂಟೆಗೆ ಪೊಳಲಿ ದ್ವಾರದ ಬಳಿಯಿಂದ ಸಾವಿರಾರು ಕಾರ್ಯಕರ್ತರ ಬೃಹತ್ ಮೆರವಣಿಗೆ ನಡೆಯಲಿದ್ದು, 4 .00 ಗಂಟೆಗೆ ಕೈಕಂಬದ ಪ್ರಿಮೀಯರ್  ಮೈದಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. 

ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿರುವ ಕೇರಳದ ಮಾಜಿ ಆರೋಗ್ಯ ಸಚಿವೆ ಕೆ. ಕೆ .ಶೈಲಜಾ ಟೀಚರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸ್ವಾಗತ ಸಮಿತಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು