4:48 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಗುರುಪುರ ಕೈಕಂಬ: ಇಂದಿನಿಂದ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ; ಸಮಾರೋಪಕ್ಕೆ ಮಾಜಿ ಸಚಿವೆ ಶೈಲಜಾ ಟೀಚರ್

22/11/2021, 09:33

ಮಂಗಳೂರು(reporterkarnataka.com): ಸಿಪಿಎಂ ಪಕ್ಷದ ಎರಡು ದಿನಗಳ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವಂಬರ್ 22, 23 ರಂದು ಗುರುಪುರ ಕೈಕಂಬದ ಪ್ರಿಮೀಯರ್ ಸಭಾಂಗಣದ ವೇದಿಕೆಯಲ್ಲಿ ನಡೆಯಲಿದೆ.

ಪ್ರಸಕ್ತ ರಾಜಕೀಯ, ಸಾಮಾಜಿಕ ವಿದ್ಯಮಾನ, ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮ್ಮೇಳನ ಚರ್ಚಿಸಲಿದೆ. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಗಳು ಹೆಚ್ಚು ಹೆಚ್ಚು ವ್ಯಾಪಾರೀಕರಣ ಗೊಳ್ಳುತ್ತಿರುವುರಿಂದ ಉಂಟಾಗಿರುವ ಬಿಕ್ಕಟ್ಟು, ಆಳಗೊಳ್ಳುತ್ತಿರುವ ರೈತ, ಕಾರ್ಮಿಕರ ಬವಣೆಗಳು, ತೀವ್ರಗೊಳ್ಳುತ್ತಿರುವ ನಿರುದ್ಯೋಗದ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದೆ ನಡೆಸಬೇಕಾಗಿರುವ ಹೋರಾಟಗಳ ರೂಪುರೇಷೆಗಳ ಕುರಿತಾದ ನಿರ್ಣಯಗಳು ಸಮ್ಮೇಳನದಲ್ಲಿ ಚರ್ಚೆಗೊಳಗಾಗಲಿವೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಯ್ಕೆಯಾದ 180 ಸಂಗಾತಿಗಳು ಪ್ರತಿನಿಧಿಗಳಾಗಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 

ನವಂಬರ್ 22 ರ ಬೆಳಿಗ್ಗೆ 10. 30ಕ್ಕೆ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜು ಸಮ್ಮೇಳನ

ಉದ್ಘಾಟಿಸಲಿದ್ದಾರೆ‌. ಹಿರಿಯ ಕಾರ್ಮಿಕ ನಾಯಕ ಯು. ಬಿ. ಲೋಕಯ್ಯ ಧ್ವಜಾರೋಹಣದ ಮೂಲಕ ಸಮ್ಮೇಳನದ ಪ್ರಕ್ರಿಯೆಗಳಿಗೆ ಚಾಲನೆ ನೀಡಲಿದ್ದಾರೆ. ನವಂಬರ್ 23 ರ ಸಂಜೆ 3. 00 ಗಂಟೆಗೆ ಪೊಳಲಿ ದ್ವಾರದ ಬಳಿಯಿಂದ ಸಾವಿರಾರು ಕಾರ್ಯಕರ್ತರ ಬೃಹತ್ ಮೆರವಣಿಗೆ ನಡೆಯಲಿದ್ದು, 4 .00 ಗಂಟೆಗೆ ಕೈಕಂಬದ ಪ್ರಿಮೀಯರ್  ಮೈದಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. 

ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿರುವ ಕೇರಳದ ಮಾಜಿ ಆರೋಗ್ಯ ಸಚಿವೆ ಕೆ. ಕೆ .ಶೈಲಜಾ ಟೀಚರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸ್ವಾಗತ ಸಮಿತಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು