2:23 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಗುರುಪುರ ಕೈಕಂಬ: ಇಂದಿನಿಂದ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ; ಸಮಾರೋಪಕ್ಕೆ ಮಾಜಿ ಸಚಿವೆ ಶೈಲಜಾ ಟೀಚರ್

22/11/2021, 09:33

ಮಂಗಳೂರು(reporterkarnataka.com): ಸಿಪಿಎಂ ಪಕ್ಷದ ಎರಡು ದಿನಗಳ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ ನವಂಬರ್ 22, 23 ರಂದು ಗುರುಪುರ ಕೈಕಂಬದ ಪ್ರಿಮೀಯರ್ ಸಭಾಂಗಣದ ವೇದಿಕೆಯಲ್ಲಿ ನಡೆಯಲಿದೆ.

ಪ್ರಸಕ್ತ ರಾಜಕೀಯ, ಸಾಮಾಜಿಕ ವಿದ್ಯಮಾನ, ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮ್ಮೇಳನ ಚರ್ಚಿಸಲಿದೆ. ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಗಳು ಹೆಚ್ಚು ಹೆಚ್ಚು ವ್ಯಾಪಾರೀಕರಣ ಗೊಳ್ಳುತ್ತಿರುವುರಿಂದ ಉಂಟಾಗಿರುವ ಬಿಕ್ಕಟ್ಟು, ಆಳಗೊಳ್ಳುತ್ತಿರುವ ರೈತ, ಕಾರ್ಮಿಕರ ಬವಣೆಗಳು, ತೀವ್ರಗೊಳ್ಳುತ್ತಿರುವ ನಿರುದ್ಯೋಗದ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದೆ ನಡೆಸಬೇಕಾಗಿರುವ ಹೋರಾಟಗಳ ರೂಪುರೇಷೆಗಳ ಕುರಿತಾದ ನಿರ್ಣಯಗಳು ಸಮ್ಮೇಳನದಲ್ಲಿ ಚರ್ಚೆಗೊಳಗಾಗಲಿವೆ. ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಯ್ಕೆಯಾದ 180 ಸಂಗಾತಿಗಳು ಪ್ರತಿನಿಧಿಗಳಾಗಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. 

ನವಂಬರ್ 22 ರ ಬೆಳಿಗ್ಗೆ 10. 30ಕ್ಕೆ ಸಿಪಿಎಂ ರಾಜ್ಯ ಕಾರ್ಯದರ್ಶಿ ಯು. ಬಸವರಾಜು ಸಮ್ಮೇಳನ

ಉದ್ಘಾಟಿಸಲಿದ್ದಾರೆ‌. ಹಿರಿಯ ಕಾರ್ಮಿಕ ನಾಯಕ ಯು. ಬಿ. ಲೋಕಯ್ಯ ಧ್ವಜಾರೋಹಣದ ಮೂಲಕ ಸಮ್ಮೇಳನದ ಪ್ರಕ್ರಿಯೆಗಳಿಗೆ ಚಾಲನೆ ನೀಡಲಿದ್ದಾರೆ. ನವಂಬರ್ 23 ರ ಸಂಜೆ 3. 00 ಗಂಟೆಗೆ ಪೊಳಲಿ ದ್ವಾರದ ಬಳಿಯಿಂದ ಸಾವಿರಾರು ಕಾರ್ಯಕರ್ತರ ಬೃಹತ್ ಮೆರವಣಿಗೆ ನಡೆಯಲಿದ್ದು, 4 .00 ಗಂಟೆಗೆ ಕೈಕಂಬದ ಪ್ರಿಮೀಯರ್  ಮೈದಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. 

ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿರುವ ಕೇರಳದ ಮಾಜಿ ಆರೋಗ್ಯ ಸಚಿವೆ ಕೆ. ಕೆ .ಶೈಲಜಾ ಟೀಚರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸ್ವಾಗತ ಸಮಿತಿಯ ಪ್ರಕಟನೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು