1:05 AM Friday20 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌: “ವಿಜ್ಞಾನ – ವಿಸ್ಮಯ ಮತ್ತು ಕುತೂಹಲ” – ವಿಮರ್ಶಾ ಕಾರ್ಯಗಾರ

09/08/2024, 13:08

ಮಂಗಳೂರು(reporterkarnataka.com): 78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಇದೇ ಬರುವ ಆಗಸ್ಟ್ 15ರ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿದ್ದು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿದೆ. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಲಿದ್ದಾರೆ. ಈ ಅಪರೂಪದ ಕಾರ್ಯಾಗಾರಕ್ಕೆ ಆಸಕ್ತ ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ಭಾಗವಹಿಸಲು ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. 7618718791/ 9483942186

ಇತ್ತೀಚಿನ ಸುದ್ದಿ

ಜಾಹೀರಾತು