10:05 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌: “ವಿಜ್ಞಾನ – ವಿಸ್ಮಯ ಮತ್ತು ಕುತೂಹಲ” – ವಿಮರ್ಶಾ ಕಾರ್ಯಗಾರ

09/08/2024, 13:08

ಮಂಗಳೂರು(reporterkarnataka.com): 78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಇದೇ ಬರುವ ಆಗಸ್ಟ್ 15ರ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿದ್ದು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿದೆ. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಲಿದ್ದಾರೆ. ಈ ಅಪರೂಪದ ಕಾರ್ಯಾಗಾರಕ್ಕೆ ಆಸಕ್ತ ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ಭಾಗವಹಿಸಲು ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. 7618718791/ 9483942186

ಇತ್ತೀಚಿನ ಸುದ್ದಿ

ಜಾಹೀರಾತು