10:08 AM Monday27 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌: “ವಿಜ್ಞಾನ – ವಿಸ್ಮಯ ಮತ್ತು ಕುತೂಹಲ” – ವಿಮರ್ಶಾ ಕಾರ್ಯಗಾರ

09/08/2024, 13:08

ಮಂಗಳೂರು(reporterkarnataka.com): 78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಇದೇ ಬರುವ ಆಗಸ್ಟ್ 15ರ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿದ್ದು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿದೆ. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಲಿದ್ದಾರೆ. ಈ ಅಪರೂಪದ ಕಾರ್ಯಾಗಾರಕ್ಕೆ ಆಸಕ್ತ ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ಭಾಗವಹಿಸಲು ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. 7618718791/ 9483942186

ಇತ್ತೀಚಿನ ಸುದ್ದಿ

ಜಾಹೀರಾತು