4:35 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌: “ವಿಜ್ಞಾನ – ವಿಸ್ಮಯ ಮತ್ತು ಕುತೂಹಲ” – ವಿಮರ್ಶಾ ಕಾರ್ಯಗಾರ

09/08/2024, 13:08

ಮಂಗಳೂರು(reporterkarnataka.com): 78ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜ್‌ನಲ್ಲಿ “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಇದೇ ಬರುವ ಆಗಸ್ಟ್ 15ರ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿದ್ದು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿದೆ. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿದೆ. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಲಿದ್ದಾರೆ. ಈ ಅಪರೂಪದ ಕಾರ್ಯಾಗಾರಕ್ಕೆ ಆಸಕ್ತ ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ಭಾಗವಹಿಸಲು ಆಸಕ್ತರು ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. 7618718791/ 9483942186

ಇತ್ತೀಚಿನ ಸುದ್ದಿ

ಜಾಹೀರಾತು