2:54 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಗುರುವಾಯನಕೆರೆ: ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಪ್ರವಹಿಸಿ ಪವರ್ ಮ್ಯಾನ್ ಸಾವು

30/05/2025, 22:18

ಬೆಳ್ತಂಗಡಿ(reporterkarnataka.com): ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದ ಸಹಾಯಕ ಪವರ್ ಮ್ಯಾನ್ ವಿದ್ಯುತ್ ಆಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಓಡಿಲ್ನಾಳ ನಿವಾಸಿ ವಿಜೇಶ್ ಎಂದು ಗುರುತಿಸಲಾಗಿದೆ.
ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಪರಿವರ್ತಕದಲ್ಲಿ ಉಂಟಾಗಿದ್ದ ತೊಂದರೆಯನ್ನು ಸರಿಪಡಿಸಲು ಅವರು ಕಂಬವೇರಿದ್ದರು. ಕೆಲಸ ನಿರ್ವಹಿಸಲು ಜಿಒಎಸ್‌ನಲ್ಲಿ ವಿದ್ಯುತ್ ಕಡಿತಗೊಳಿಸಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಿಒಎಸ್‌ನಲ್ಲಿ ಸರಿಯಾಗಿ ವಿದ್ಯುತ್ ಕಡಿತಗೊಳ್ಳದ ಕಾರಣ ಈ ದುರಂತ ನಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು