1:44 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಗುರುವಾಯನಕೆರೆ: ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಪ್ರವಹಿಸಿ ಪವರ್ ಮ್ಯಾನ್ ಸಾವು

30/05/2025, 22:18

ಬೆಳ್ತಂಗಡಿ(reporterkarnataka.com): ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದ ಸಹಾಯಕ ಪವರ್ ಮ್ಯಾನ್ ವಿದ್ಯುತ್ ಆಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಓಡಿಲ್ನಾಳ ನಿವಾಸಿ ವಿಜೇಶ್ ಎಂದು ಗುರುತಿಸಲಾಗಿದೆ.
ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಪರಿವರ್ತಕದಲ್ಲಿ ಉಂಟಾಗಿದ್ದ ತೊಂದರೆಯನ್ನು ಸರಿಪಡಿಸಲು ಅವರು ಕಂಬವೇರಿದ್ದರು. ಕೆಲಸ ನಿರ್ವಹಿಸಲು ಜಿಒಎಸ್‌ನಲ್ಲಿ ವಿದ್ಯುತ್ ಕಡಿತಗೊಳಿಸಿ ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಿಒಎಸ್‌ನಲ್ಲಿ ಸರಿಯಾಗಿ ವಿದ್ಯುತ್ ಕಡಿತಗೊಳ್ಳದ ಕಾರಣ ಈ ದುರಂತ ನಡೆದಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು