3:14 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಗುತ್ತಿಗೆದಾರ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ: ಬಿಜೆಪಿ ನಾಯಕರು ಗೈರು; ಕಾಂಗ್ರೆಸ್ ನ ಲಕ್ಷ್ಮಿ ಹೆಬ್ಬಾಳ್ಕರ್ ಹಾಜರು

14/04/2022, 12:32

ಬೆಳಗಾವಿ(reporterkarnataka.com): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ವಿರುದ್ಧ‌ 40% ಕಮಿಷನ್ ಆರೋಪ‌ ಮಾಡಿ ಪ್ರಧಾನಿಗೆ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್‌ ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ಬಡಸ ಗ್ರಾಮದಲ್ಲಿ ನೆರವೇರಿತು.

ಸಂತೋಷ್ ಪಾಟೀಲ್ ಅವರ ಪಾರ್ಥಿವ ಶರೀರವನ್ನು ಅವರ ಬಡಸ ಗ್ರಾಮದ ತೋಟದ ಮನೆಯ ಎದುರು ಇರಿಸಿ ಅಂತಿಮ ಪೂಜೆ ಸಲ್ಲಿಸಲಾಯಿತು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಡುಪಿಯ ಖಾಸಗಿ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಮೃತದೇಹವನ್ನು ಬುಧವಾರ ರಾತ್ರಿಯೇ ಪೊಲೀಸ್ ಬಂದೋಬಸ್ತ್‌ನಲ್ಲಿ ಅವರ ಹುಟ್ಟೂರಿಗೆ ಸಾಗಿಸಲಾಗಿತ್ತು.

ಅಂತ್ಯ ಸಂಸ್ಕಾರದ ವೇಳೆ ಯಾವುದೇ ಬಿಜೆಪಿ ನಾಯಕರು ಉಪಸ್ಥಿತರಿರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಂತ್ಯ ಸಂಸ್ಕಾರ ನಡೆಯುವ ಸ್ಥಳಕ್ಕೆ ಆಗಮಿಸಬೇಕೆಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸ್ಥಳೀಯರು ಆಗ್ರಹಿಸಿದರು. ಆದರೆ ಸಚಿವರು ಆಗಮಿಸಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು