12:49 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಗುತ್ತಿಗೆದಾರರಿಂದ ತುಘಲಕ್‌ ದರ್ಬಾರ್‌: ಕಾರ್ಕಳ ಬಿಜೆಪಿ ಆರೋಪ; ಪ್ರತಿಭಟನೆಯ ಎಚ್ಚರಿಕೆ

21/06/2023, 19:54

ಕಾರ್ಕಳ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತಕ್ಕೆ ಬಂದಂದಿನಿಂದ ಕಾರ್ಕಳದಲ್ಲಿ ಒಬ್ಬರು ತಾನೇ ಜನಪ್ರತಿನಿಧಿಯ ತರಹ ತನ್ನ ತಂಡದೊಂದಿಗೆ ಯಾವುದಾದರೊಂದು ಇಲಾಖೆ ಕಚೇರಿಗೆ ಹೋಗಿ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವುದು, ಕೇಳದಿದ್ದಲ್ಲಿ ವರ್ಗಾವಣೆ ಮಾಡುತ್ತೇವೆ ಎಂದು ಬೆದರಿಸುತ್ತಿದ್ದಾರೆ. ಒಂದು ವೇಳೆ ಇಂತಹ ಚಾಳಿ ಮುಂದುವರೆದಲ್ಲಿ ಈ ವಿಷಯವನ್ನೇ ಮುಂದಿಟ್ಟುಕೊಂಡು ಕಾರ್ಕಳ ಭಾರತೀಯ ಜನತಾ ಪಕ್ಷವು ಮುಂದಿನ ದಿನಗಳಲ್ಲಿ ಬೃಹತ್‌ ಪ್ರತಿಭಟನೆ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದೆ.
ಚುನಾವಣಾ ಫಲಿತಾಂಶದ ದಿನ ಒಂದು ಕ್ಷಣಕ್ಕೆ ತಾನೇ ವಿಜಯಿ ಆಗಿದ್ದೇನೆಂದು ಬೀಗಿದ ಕಾರ್ಕಳದ ಗುತ್ತಿಗೆದಾರರೊಬ್ಬರು ಅದರ ಗುಂಗಿನಿಂದ ಹೊರಬಾರದೆ ಕಾರ್ಕಳದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಹಾಗೂ ಇತರ ವೈದ್ಯರ ಹಾಗೂ ಸಿಬ್ಬಂಧಿಗಳ ಸಭೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ಧಿ ಹರಡಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಒಬ್ಬ ಯಾವುದೇ ಹಂತದ ಜನಪ್ರತಿನಿಧಿ ಅಲ್ಲದವರು ಈ ತರಹ ಇಲಾಖೆಯ ಸಭೆ ನಡೆಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ. ಇಡೀ ಉಡುಪಿ ಜಿಲ್ಲೆಯ ಜನತೆ ಕಾಂಗ್ರೆಸ್‌ ಪಕ್ಷವನ್ನು ಎಲ್ಲ ಕಡೆ ತಿರಸ್ಕರಿಸಿದ್ದಾರೆ. ಆದರೂ ತಾನೇ ಜನಪ್ರತಿನಿಧಿಗಳಂತೆ ವರ್ತಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುತ್ತಿರುವ ಅವಮಾನ. ಯಾವುದೋ ಒಬ್ಬ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಸರಕಾರಿ ಕಚೇರಿಯಲ್ಲಿ, ಇಲಾಖೆಯಲ್ಲಿ ಸಭೆ ನಡೆಸಬಹುದಾದರೆ ಕಾರ್ಕಳದ ಒಟ್ಟು 8 ಜನ ಸೋತ ಅಭ್ಯರ್ಥಿಗಳೂ ಇದೇ ತರಹ ಇನ್ನು ಅನುಕರಣೆ ಮಾಡಿದರೆ ಸರಕಾರಿ ಆಡಳಿತ ವ್ಯವಸ್ಥೆಯು ಕುಸಿಯುವ ಸಾಧ್ಯತೆ ಇದೆ.
ಇಂತಹ ಬೆದರಿಕೆ ತಂತ್ರವನ್ನು ಮುಂದುವರೆಸಿದರೆ ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಇದಕ್ಕೆ ತಕ್ಕುದಾದ ಪ್ರತಿಕ್ರಿಯೆಯನ್ನು ನೀಡಲಿದೆ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ ಎಂದು ಕಾರ್ಕಳ ಬಿಜೆಪಿ ವಕ್ತಾರ ಹರೀಶ್ ಶೆಣೈ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು