8:45 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಗುತ್ತಿಗೆದಾರರಿಂದ ತುಘಲಕ್‌ ದರ್ಬಾರ್‌: ಕಾರ್ಕಳ ಬಿಜೆಪಿ ಆರೋಪ; ಪ್ರತಿಭಟನೆಯ ಎಚ್ಚರಿಕೆ

21/06/2023, 19:54

ಕಾರ್ಕಳ(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತಕ್ಕೆ ಬಂದಂದಿನಿಂದ ಕಾರ್ಕಳದಲ್ಲಿ ಒಬ್ಬರು ತಾನೇ ಜನಪ್ರತಿನಿಧಿಯ ತರಹ ತನ್ನ ತಂಡದೊಂದಿಗೆ ಯಾವುದಾದರೊಂದು ಇಲಾಖೆ ಕಚೇರಿಗೆ ಹೋಗಿ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿರುವುದು, ಕೇಳದಿದ್ದಲ್ಲಿ ವರ್ಗಾವಣೆ ಮಾಡುತ್ತೇವೆ ಎಂದು ಬೆದರಿಸುತ್ತಿದ್ದಾರೆ. ಒಂದು ವೇಳೆ ಇಂತಹ ಚಾಳಿ ಮುಂದುವರೆದಲ್ಲಿ ಈ ವಿಷಯವನ್ನೇ ಮುಂದಿಟ್ಟುಕೊಂಡು ಕಾರ್ಕಳ ಭಾರತೀಯ ಜನತಾ ಪಕ್ಷವು ಮುಂದಿನ ದಿನಗಳಲ್ಲಿ ಬೃಹತ್‌ ಪ್ರತಿಭಟನೆ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡಿದೆ.
ಚುನಾವಣಾ ಫಲಿತಾಂಶದ ದಿನ ಒಂದು ಕ್ಷಣಕ್ಕೆ ತಾನೇ ವಿಜಯಿ ಆಗಿದ್ದೇನೆಂದು ಬೀಗಿದ ಕಾರ್ಕಳದ ಗುತ್ತಿಗೆದಾರರೊಬ್ಬರು ಅದರ ಗುಂಗಿನಿಂದ ಹೊರಬಾರದೆ ಕಾರ್ಕಳದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಹಾಗೂ ಇತರ ವೈದ್ಯರ ಹಾಗೂ ಸಿಬ್ಬಂಧಿಗಳ ಸಭೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ಧಿ ಹರಡಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಒಬ್ಬ ಯಾವುದೇ ಹಂತದ ಜನಪ್ರತಿನಿಧಿ ಅಲ್ಲದವರು ಈ ತರಹ ಇಲಾಖೆಯ ಸಭೆ ನಡೆಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ. ಇಡೀ ಉಡುಪಿ ಜಿಲ್ಲೆಯ ಜನತೆ ಕಾಂಗ್ರೆಸ್‌ ಪಕ್ಷವನ್ನು ಎಲ್ಲ ಕಡೆ ತಿರಸ್ಕರಿಸಿದ್ದಾರೆ. ಆದರೂ ತಾನೇ ಜನಪ್ರತಿನಿಧಿಗಳಂತೆ ವರ್ತಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುತ್ತಿರುವ ಅವಮಾನ. ಯಾವುದೋ ಒಬ್ಬ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಸರಕಾರಿ ಕಚೇರಿಯಲ್ಲಿ, ಇಲಾಖೆಯಲ್ಲಿ ಸಭೆ ನಡೆಸಬಹುದಾದರೆ ಕಾರ್ಕಳದ ಒಟ್ಟು 8 ಜನ ಸೋತ ಅಭ್ಯರ್ಥಿಗಳೂ ಇದೇ ತರಹ ಇನ್ನು ಅನುಕರಣೆ ಮಾಡಿದರೆ ಸರಕಾರಿ ಆಡಳಿತ ವ್ಯವಸ್ಥೆಯು ಕುಸಿಯುವ ಸಾಧ್ಯತೆ ಇದೆ.
ಇಂತಹ ಬೆದರಿಕೆ ತಂತ್ರವನ್ನು ಮುಂದುವರೆಸಿದರೆ ಕಾರ್ಕಳ ಭಾರತೀಯ ಜನತಾ ಪಾರ್ಟಿಯು ಇದಕ್ಕೆ ತಕ್ಕುದಾದ ಪ್ರತಿಕ್ರಿಯೆಯನ್ನು ನೀಡಲಿದೆ ಎಂದು ಈ ಮೂಲಕ ತಿಳಿಯಪಡಿಸುತ್ತೇನೆ ಎಂದು ಕಾರ್ಕಳ ಬಿಜೆಪಿ ವಕ್ತಾರ ಹರೀಶ್ ಶೆಣೈ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು