11:54 PM Saturday6 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಗ್ಯಾರಂಟಿ ಯೋಜನೆಯ ಫಲ ಚುನಾವಣಾ ಫಲಿತಾಂಶದಲ್ಲಿ ಬರಲಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ

02/06/2024, 09:40

ಮಂಗಳೂರು(reporterkarnataka.com): ವಿಧಾನ ಪರಿಷತ್ ಚುನಾವಣೆಯನ್ನೂ ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ. ಕಾಂಗ್ರೆಸ್ ಎಲ್ಲ ಕ್ಷೇತ್ರಗಳಲ್ಲಿ ವಿಜಯ ಪತಾಕೆ ಹಾರಿಸಲಿದೆ. ವಿಧಾನ ಸಭೆ ಮಾದರಿಯಲ್ಲೇ ವಿಧಾನ ಪರಿಷತ್ತಿನಲ್ಲೂ ಪಕ್ಷ ಮೇಲ್ಗೈ ಸಾಧಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಯ ಫಲ ಫಲಿತಾಂಶದಲ್ಲಿ ಬರಲಿದೆ. ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವ ಕಾರಣ ಕಾಂಗ್ರೆಸ್ ಗೆ ಇದು ಪೂರಕವಾಗಲಿದೆ. ಬೂತಿನಿಂದ ಬ್ಲಾಕ್ ಮಟ್ಟದವರೆಗೆ ಪಕ್ಷವನ್ನು ಸಂಘಟಿಸಲಾಗಿದೆ. ಶಿಕ್ಷಕರ ಬೇಡಿಕೆಯಾದ 7ನೇ ವೇತನ ಆಯೋಗ ಮತ್ತು ಒಪಿಎಸ್ ಜಾರಿ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರಕರಣದ ಕುರಿತು ಮಾತನಾಡಿದ ಅವರು, ಪೊಲೀಸರು ಪೂಂಜ ಅವರನ್ನು ಅಂದೇ ಬಂಧಿಸಬೇಕಿತ್ತು. ಕಾನೂನಿಗಿಂತ ಯಾರೂ ದೊಡ್ಡವಲ್ಲ. ಶಾಸಕರು ಸಮಾಜಕ್ಕೆ ಮಾದರಿಯಾಗಿ ಜವಾಬ್ದಾರಿಯಿಂದ ವರ್ತಿಸಬೇಕು. ಅಕ್ರಮ ಕಲ್ಲಕೋರೆ ಪ್ರಕರಣದಲ್ಲಿ ಅವರು ರೌಡಿಶೀಟರ್ ಪರವಹಿಸಿ ಪೊಲೀಸ್ ಅಧಿಕಾರಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂದು ಮಂಜುನಾಥ ಭಂಡಾರಿ ಅಸಮಾಧಾನ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಅಶೋಕ್ ಕೊಡವೂರ್, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಎಂ. ಎಸ್. ಮುಹಮ್ಮದ್, ಇನಾಯತ್ ಅಲಿ, ಲುಕ್ಮನ್ ಬಂಟ್ವಾಳ್, ಅಶ್ವಿನ್ ಕುಮಾರ್ ರೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು