8:44 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಹಾಡಹಗಲೇ ಮನೆ ಕಳ್ಳತನ: ಇಬ್ಬರು ಖತರ್ನಾಕ್ ಕಳ್ಳರ ಬಂಧನ; 78 ಗ್ರಾಂ ಚಿನ್ನಾಭರಣ ವಶ

24/08/2023, 13:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ನಡೆದ ಮನೆ ದರೋಡೆ ಪ್ರಕರಣ ದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸ್ವಾಮಿ ಮತ್ತು ಸಂಜಯ್ ಎಂದು ಗುರುತಿಸಲಾಗಿದೆ. ಸ್ವಾಮಿ ಎಂಬಾತ ಮೂಡಿಗೆರೆ ಸಮೀಪದ ಕೃಷ್ಣಾಪುರದವನು. ಲಾರಿ ಕ್ಲೀನರ್, ಗಾರೆ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಮತ್ತೊಬ್ಬ ಆರೋಪಿ ಸಂಜಯ್ ಚನ್ನಗಿರಿ ಮೂಲದವನು. ಅವನ ಹೆಂಡತಿಯ ಮನೆ ಮೂಡಿಗೆರೆ ಸಮೀಪದ ಹಂಡುಗುಳಿ ನವಗ್ರಾಮದವರು.
ಪ್ರಕರಣದ ಹಿನ್ನೆಲೆ: ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ವೇದಾವತಿ ಎಂಬುವರ ಮನೆಯ ಹೆಂಚುಗಳನ್ನ ತೆಗೆದು ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು. ಮನೆಯೊಡತಿ  ವೇದಾವತಿ ಬೆಳಗ್ಗೆ ತಮ್ಮ ಕಾಫಿತೋಟಕ್ಕೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೆ ಮನೆಗೆ ಬರುವಷ್ಟರಲ್ಲಿ ಮನೆ ಹೆಂಚು ತೆಗೆದು ಕಳ್ಳತನ ಮಾಡಿದ್ದು ಕಂಡುಬಂದಿತ್ತು.
ಹಾಡಹಗಲೇ ಕಳ್ಳತನ ನಡೆದಿದ್ದು ಕಂಡು ಗ್ರಾಮದ ಜನರು ಆತಂಕಕ್ಕೆ ಈಡಾಗಿದ್ದರು.
ಇವರಿಬ್ಬರು ಕಳ್ಳತನ, ದರೋಡೆಯನ್ನು ವೃತ್ತಿಯಾಗಿಸಿಕೊಂಡಿದ್ದರು ಎಂದು  ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಈಗಾಗಲೇ 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಇವರು ಆರೋಪಿಗಳಾಗಿದ್ದು, ಜೈಲು ವಾಸ ಅನುಭವಿಸಿ ಹೊರಬಂದಿದ್ದಾರೆ ಎಂದು ತಿಳಿದು ಬಂದಿದೆ. ಕಣಚೂರು ಅಲ್ಲದೇ ಇತ್ತೀಚೆಗೆ ಇವರು ಶನಿವಾರಸಂತೆ ಎಂಬಲ್ಲಿಯೂ ದರೋಡೆ ಕೃತ್ಯ ನಡೆಸಿದ್ದರು ಎನ್ನಲಾಗಿದೆ.
ಇವರು ಬೈಕಿನಲ್ಲಿ ತಮಗೆ ಪರಿಚಿತವಿರುವ ಊರುಗಳಿಗಳಲ್ಲಿ ಸುತ್ತುತ್ತಿದ್ದರು ಎನ್ನಲಾಗಿದೆ. ಮನೆಗಳನ್ನು ಗಮನಿಸುತ್ತಾ ಯಾವ ಮನೆಗಳಿಗೆ ಬೀಗ ಹಾಕಿರುತ್ತಾರೆ ಎಂದು ಗಮನಿಸಿ ಕಿಟಕಿ ಬಾಗಿಲು ಒಡೆದು, ಹೆಂಚು ತೆಗೆದು ಮನೆ ದರೋಡೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಆರೋಪಿಗಳನ್ನು ಬಂಧಿಸಿ ಅವರಿಂದ 78 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳ ಮಹಜರು ನಡೆಸಿ ವಿಚಾರಣೆ ಒಳಪಡಿಸಲಾಗಿದೆ. ಮೂಡಿಗೆರೆ ಸರ್ಕಲ್ ಇನ್ಸ್ ಪೆಕ್ಟರ್ ಸೋಮೇಗೌಡ, ಗೋಣಿಬೀಡು ಠಾಣಾಧಿಕಾರಿ ಹರ್ಷಗೌಡ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು.
ವೇಗವಾಗಿ ಕಳ್ಳರನ್ನು ಬಂಧಿಸಿದ ಪೊಲೀಸರ ಶ್ರಮಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು