2:02 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹಾಡುತ್ತಾ ಕುಸಿದು ಬಿದ್ದು ಅಸುನೀಗಿದ ಖ್ಯಾತ ಗಾಯಕ ಕೆಕೆ !

01/06/2022, 06:58


ಕೊಲ್ಕತ್ತಾ(Reporterkarnataka.com):
ಖ್ಯಾತ ಬಾಲಿವುಡ್ ಗಾಯಕ ಕೃಷ್ಣಕುಮಾರ್ ಕುನ್ನತ್(ಕೆಕೆ) ವೇದಿಕೆಯಲ್ಲೇ ಕುಸಿದು ಬಿದ್ದ ನಿಧನರಾಗಿದ್ದಾರೆ. ಕೋಲ್ಕತಾದಲ್ಲಿ ನಜ್ರುಲ್ ಮಂಜ್‌ನಲ್ಲಿ ಆಯೋಜಿಸಿದ್ದ ಕಾನ್ಸರ್ಟ್‌ನಲ್ಲಿ ಪಾಲ್ಗೊಂಡ ಕೆಕೆ ಹಾಡುತ್ತಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆ ದಾಖಲಿಸಿದರು ಪ್ರಯೋಜನವಾಗಿಲ್ಲ.

ಕೋಲ್ಕತಾದಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮಕ್ಕಾಗಿ ಕೆಕೆ ತಂಡ ಮೇ.30ಕ್ಕೆ ನಗರದಲ್ಲಿ ಬೀಡುಬಿಟ್ಟಿತ್ತು. ಸಂಗೀತ ಕಾರ್ಯಕ್ರಮದ ಕುರಿತು ಕೆಕೆ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸಂತಸ ಹಂಚಿಕೊಂಡಿದ್ದರು. ಕೆಕೆ ಸಂಗೀತ ಕಾರ್ಯಕ್ರಮಕ್ಕೆ ಕಿಕ್ಕಿರಿದು ಜನ ತುಂಬಿದ್ದರು. ಆದರೆ ಹಾಡುತ್ತಲೇ ಕುಸಿದ ಬಿದ್ದ ಕೆಕೆ ಬದುಕಿ ಬರಲೇ ಇಲ್ಲ.

ವೇದಿಕೆಯಲ್ಲಿ ಕುಸಿದ ಕೆಕೆಗೆ ತಕ್ಷಣ ವೈದ್ಯಕೀಯ ನೆರವು ನೀಡಲಾಯಿತು. ಅಷ್ಟೇ ವೇಗದಲ್ಲಿ ನಗರದ CMRI ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಕೆಕೆ ಪ್ರಾಣ ಪಕ್ಷಿ ಹಾರಿಹೋಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು