9:17 PM Friday14 - November 2025
ಬ್ರೇಕಿಂಗ್ ನ್ಯೂಸ್
ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ…

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಗಾನ ಕೋಗಿಲೆ ; ಇಹಲೋಕ ತ್ಯಜಿಸಿದ ಭಾರತರತ್ನ ಲತಾ ಮಂಗೇಶ್ಕರ್

06/02/2022, 10:21

ಮುಂಬಾಯಿ :

ಭಾರತ ಸಿನಿಮಾ ರಂಗ ಕಂಡಂತಹ ಅದ್ಭುತ ಗಾಯಕಿ ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ.

ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು.
ಇತ್ತೀಚೆಗೆ ಕೊರೊನಾ (Corona) ಸೋಂಕಿಗೆ ತುತ್ತಾಗಿದ್ದ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಕೊರೊನಾ ಹಾಗೂ ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಅವರು, ವೆಂಟಿಲೇಟರ್​ನಿಂದ ಹೊರಬಂದಿದ್ದರು. ಆದರೆ ನಿನ್ನೆ (ಶನಿವಾರ) ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಅವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಎಎನ್​ಐಗೆ ಮಾಹಿತಿ ನೀಡಿದ್ದಾರೆ. ಲತಾ ಅವರ ನಿಧನದಿಂದ ದೇಶದ ಗಾಯನ ಪರಂಪರೆಯ ಹಿರಿಯ ಕೊಂಡಿ ಕಳಚಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು