9:11 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹಾಡು ನಿಲ್ಲಿಸಿದ ಗಾನ ಕೋಗಿಲೆ ; ಇಹಲೋಕ ತ್ಯಜಿಸಿದ ಭಾರತರತ್ನ ಲತಾ ಮಂಗೇಶ್ಕರ್

06/02/2022, 10:21

ಮುಂಬಾಯಿ :

ಭಾರತ ಸಿನಿಮಾ ರಂಗ ಕಂಡಂತಹ ಅದ್ಭುತ ಗಾಯಕಿ ಭಾರತ ರತ್ನ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಶಿವಸೇನೆ ಸಂಸದ ಸಂಜಯ್ ರಾವುತ್ ಟ್ವೀಟ್ ಮೂಲಕ ವಿಷಯವನ್ನು ಖಚಿತಪಡಿಸಿದ್ದಾರೆ.

ಭಾರತ ಕಂಡ ಜನಪ್ರಿಯ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು.
ಇತ್ತೀಚೆಗೆ ಕೊರೊನಾ (Corona) ಸೋಂಕಿಗೆ ತುತ್ತಾಗಿದ್ದ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಕೊರೊನಾ ಹಾಗೂ ನ್ಯುಮೋನಿಯಾದಿಂದ ಚೇತರಿಸಿಕೊಂಡಿದ್ದ ಅವರು, ವೆಂಟಿಲೇಟರ್​ನಿಂದ ಹೊರಬಂದಿದ್ದರು. ಆದರೆ ನಿನ್ನೆ (ಶನಿವಾರ) ಮತ್ತೆ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಅವರು ಬಹು ಅಂಗಾಂಗ ವೈಫಲ್ಯದಿಂದ ಇಹಲೋಕ ತ್ಯಜಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಎಎನ್​ಐಗೆ ಮಾಹಿತಿ ನೀಡಿದ್ದಾರೆ. ಲತಾ ಅವರ ನಿಧನದಿಂದ ದೇಶದ ಗಾಯನ ಪರಂಪರೆಯ ಹಿರಿಯ ಕೊಂಡಿ ಕಳಚಿದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು