12:59 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಹಾಡುಗಳು ಮಧುರ ಲಯ ಸಾಹಿತ್ಯ ಸಂಯೋಜನೆ: ವಿದ್ವಾನ್ ಯಶವಂತ ಎಂ.ಜಿ.

05/09/2023, 14:55

ಉಡುಪಿ(reporterkarnataka.com): ಹಾಡುಗಳು ಮಧುರ, ಲಯ, ಸಾಹಿತ್ಯ, ಜೊತೆಗೆ ಸಂಗೀತ ವಾದ್ಯಗಳನ್ನು ಹೊಂದಿರುವ ಸಂಗೀತ ಸಂಯೋಜನೆಯಾಗಿದೆ. ಅಬಾಲವೃದ್ದರಾಗಿ ಸಂಗೀತವನ್ನು ಕೇಳುತ್ತಾರೆ ಎಂದು ಶಿಕ್ಷಕ  ವಿದ್ವಾನ್ ಯಶವಂತ ಹೇಳಿದರು.
ಅವರು ಭಾನುವಾರ  ಮಣಿಪಾಲದ ಪರ್ಣಕುಟೀರ ಸಭಾಂಗಣದಲ್ಲಿ ನಡೆದ ಸ್ವರಾಮೃತ ತಂಡದ ಲೋಗೋ ಬಿಡುಗಡೆ ಗೊಳಿಸಿ ಮಾತನಾಡಿದರು.
ಹಾಡುಗಳನ್ನು ಸಂಗೀತ ಕೃತಿಗಳೆಂದು ಪರಿಗಣಿಸಲಾಗುತ್ತದೆ . ಸ್ಫೂರ್ತಿ, ಸಂವೇದನೆ ಮೂಲಕ ಮನಸ್ಸಿಗೆ ಅಪ್ತವಾಗುತ್ತವೆ ಎಂದರು.
ಕೆಎಂಸಿ ಅಸ್ಪತ್ರೆಯ  ಇಲೆಕ್ಟ್ರಿಕಲ್ ಇಂಜಿನಿಯರ್  ರವೀಂದ್ರ ಮಾತನಾಡಿ, ಸಾಹಿತ್ಯಕ್ಕೆ ರಾಗವನ್ನು ಕೊಟ್ಟು ಹಾಡುಗಳನ್ನು ಹಾಡುತ್ತಾ ಮನಸ್ಸನ್ನು  ಮುದಗೊಳಿಸಲು ಸಾಧ್ಯ ಎಂದರು.
ಗಾಯಕಿ ರಶ್ಮಿಅರ್. ಪ್ರಭು  ಮಾತನಾಡಿ, ಸ್ವರಕ್ಕೆ ಅಮೃತವನ್ನು ನೀಡುವ ಸ್ವರಾಮೃತ ಪರಿಕಲ್ಪನೆ ಅದ್ಭುತವಾಗಿದೆ. ಹಾಡುಗಾರರಿಗೆ ಈ ತಂಡ ಆಶ್ರಯ ನೀಡಲಿದೆ ಎಂದರು
ಖ್ಯಾತ ಗಾಯಕಿ ವೈಷ್ಣವಿ ರವೀಂದ್ರ ಮಾತನಾಡಿ, ಹಾಡುಗಾರಿಕೆ ಕೇವಲ ಮನರಂಜನೆ ಯಾಗಿಸದೆ ,ಸ್ಪರ್ಧಾತ್ಮಕವಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಉದ್ಯಮಿ ರಾಧಾಕೃಷ್ಣ ಮಣಿಪಾಲ್ ಮಾತನಾಡಿದರು.
ಶಾಶ್ವತ್ ತೆಳ್ಳಾರು, ಡಾ.ಗುರುಪ್ರಸಾದ್  ಶುಭ ಹಾರೈಸಿದರು.

ಸಭೆಯಲ್ಲಿ ಪತ್ರಕರ್ತ ಹರಿಪ್ರಸಾದ್ ನಂದಳಿಕೆ, ರಾಂ ಅಜೆಕಾರು , ಚಿತ್ತಾರ ಸೇವಾ ರೂವಾರಿ ಸುಜಿತ್ ನಂದಳಿಕೆ,  ಮಲಬಾರ್ ಗೋಲ್ಡ್ ಮಾರ್ಕೆಟಿಂಗ್ ವ್ಯವಸ್ಥಾಪಕ ರಾಘವೇಂದ್ರ ನಾಯಕ್, ಲೇಖಕಿ ಸುಮ ಕಿರಣ್ , ಲೆಕ್ಕ ಪರಿಶೋಧಕ ಸುರೇಶ್, ಗೀತಾಂಜಲಿ , ಖ್ಯಾತ ಛಾಯಾಗ್ರಾಹಕ ಶರತ್ ಕಾನಂಗಿ, ಡಾ. ಸ್ನೇಹ ಗುರುಪ್ರಸಾದ್, ಉದ್ಯಮಿ ಗಳಾದ ಹರೀಶ್ ಶೆಟ್ಟಿ, ಶಶಿಕಾಂತ್ ಪ್ರಭು ,ಜಯಾನಂದ ಕುಲಾಲ್ ,ಪ್ರಸಾದ್‌ಅಚಾರ್ಯ, ರೂಪೇಶ್ , ಸುಭಾಸ್
ಕಿರಣ್   ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು