8:53 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಹಾಡುಗಳು ಮಧುರ ಲಯ ಸಾಹಿತ್ಯ ಸಂಯೋಜನೆ: ವಿದ್ವಾನ್ ಯಶವಂತ ಎಂ.ಜಿ.

05/09/2023, 14:55

ಉಡುಪಿ(reporterkarnataka.com): ಹಾಡುಗಳು ಮಧುರ, ಲಯ, ಸಾಹಿತ್ಯ, ಜೊತೆಗೆ ಸಂಗೀತ ವಾದ್ಯಗಳನ್ನು ಹೊಂದಿರುವ ಸಂಗೀತ ಸಂಯೋಜನೆಯಾಗಿದೆ. ಅಬಾಲವೃದ್ದರಾಗಿ ಸಂಗೀತವನ್ನು ಕೇಳುತ್ತಾರೆ ಎಂದು ಶಿಕ್ಷಕ  ವಿದ್ವಾನ್ ಯಶವಂತ ಹೇಳಿದರು.
ಅವರು ಭಾನುವಾರ  ಮಣಿಪಾಲದ ಪರ್ಣಕುಟೀರ ಸಭಾಂಗಣದಲ್ಲಿ ನಡೆದ ಸ್ವರಾಮೃತ ತಂಡದ ಲೋಗೋ ಬಿಡುಗಡೆ ಗೊಳಿಸಿ ಮಾತನಾಡಿದರು.
ಹಾಡುಗಳನ್ನು ಸಂಗೀತ ಕೃತಿಗಳೆಂದು ಪರಿಗಣಿಸಲಾಗುತ್ತದೆ . ಸ್ಫೂರ್ತಿ, ಸಂವೇದನೆ ಮೂಲಕ ಮನಸ್ಸಿಗೆ ಅಪ್ತವಾಗುತ್ತವೆ ಎಂದರು.
ಕೆಎಂಸಿ ಅಸ್ಪತ್ರೆಯ  ಇಲೆಕ್ಟ್ರಿಕಲ್ ಇಂಜಿನಿಯರ್  ರವೀಂದ್ರ ಮಾತನಾಡಿ, ಸಾಹಿತ್ಯಕ್ಕೆ ರಾಗವನ್ನು ಕೊಟ್ಟು ಹಾಡುಗಳನ್ನು ಹಾಡುತ್ತಾ ಮನಸ್ಸನ್ನು  ಮುದಗೊಳಿಸಲು ಸಾಧ್ಯ ಎಂದರು.
ಗಾಯಕಿ ರಶ್ಮಿಅರ್. ಪ್ರಭು  ಮಾತನಾಡಿ, ಸ್ವರಕ್ಕೆ ಅಮೃತವನ್ನು ನೀಡುವ ಸ್ವರಾಮೃತ ಪರಿಕಲ್ಪನೆ ಅದ್ಭುತವಾಗಿದೆ. ಹಾಡುಗಾರರಿಗೆ ಈ ತಂಡ ಆಶ್ರಯ ನೀಡಲಿದೆ ಎಂದರು
ಖ್ಯಾತ ಗಾಯಕಿ ವೈಷ್ಣವಿ ರವೀಂದ್ರ ಮಾತನಾಡಿ, ಹಾಡುಗಾರಿಕೆ ಕೇವಲ ಮನರಂಜನೆ ಯಾಗಿಸದೆ ,ಸ್ಪರ್ಧಾತ್ಮಕವಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಉದ್ಯಮಿ ರಾಧಾಕೃಷ್ಣ ಮಣಿಪಾಲ್ ಮಾತನಾಡಿದರು.
ಶಾಶ್ವತ್ ತೆಳ್ಳಾರು, ಡಾ.ಗುರುಪ್ರಸಾದ್  ಶುಭ ಹಾರೈಸಿದರು.

ಸಭೆಯಲ್ಲಿ ಪತ್ರಕರ್ತ ಹರಿಪ್ರಸಾದ್ ನಂದಳಿಕೆ, ರಾಂ ಅಜೆಕಾರು , ಚಿತ್ತಾರ ಸೇವಾ ರೂವಾರಿ ಸುಜಿತ್ ನಂದಳಿಕೆ,  ಮಲಬಾರ್ ಗೋಲ್ಡ್ ಮಾರ್ಕೆಟಿಂಗ್ ವ್ಯವಸ್ಥಾಪಕ ರಾಘವೇಂದ್ರ ನಾಯಕ್, ಲೇಖಕಿ ಸುಮ ಕಿರಣ್ , ಲೆಕ್ಕ ಪರಿಶೋಧಕ ಸುರೇಶ್, ಗೀತಾಂಜಲಿ , ಖ್ಯಾತ ಛಾಯಾಗ್ರಾಹಕ ಶರತ್ ಕಾನಂಗಿ, ಡಾ. ಸ್ನೇಹ ಗುರುಪ್ರಸಾದ್, ಉದ್ಯಮಿ ಗಳಾದ ಹರೀಶ್ ಶೆಟ್ಟಿ, ಶಶಿಕಾಂತ್ ಪ್ರಭು ,ಜಯಾನಂದ ಕುಲಾಲ್ ,ಪ್ರಸಾದ್‌ಅಚಾರ್ಯ, ರೂಪೇಶ್ , ಸುಭಾಸ್
ಕಿರಣ್   ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು