10:02 AM Monday28 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಹಾಡುಗಳು ಮಧುರ ಲಯ ಸಾಹಿತ್ಯ ಸಂಯೋಜನೆ: ವಿದ್ವಾನ್ ಯಶವಂತ ಎಂ.ಜಿ.

05/09/2023, 14:55

ಉಡುಪಿ(reporterkarnataka.com): ಹಾಡುಗಳು ಮಧುರ, ಲಯ, ಸಾಹಿತ್ಯ, ಜೊತೆಗೆ ಸಂಗೀತ ವಾದ್ಯಗಳನ್ನು ಹೊಂದಿರುವ ಸಂಗೀತ ಸಂಯೋಜನೆಯಾಗಿದೆ. ಅಬಾಲವೃದ್ದರಾಗಿ ಸಂಗೀತವನ್ನು ಕೇಳುತ್ತಾರೆ ಎಂದು ಶಿಕ್ಷಕ  ವಿದ್ವಾನ್ ಯಶವಂತ ಹೇಳಿದರು.
ಅವರು ಭಾನುವಾರ  ಮಣಿಪಾಲದ ಪರ್ಣಕುಟೀರ ಸಭಾಂಗಣದಲ್ಲಿ ನಡೆದ ಸ್ವರಾಮೃತ ತಂಡದ ಲೋಗೋ ಬಿಡುಗಡೆ ಗೊಳಿಸಿ ಮಾತನಾಡಿದರು.
ಹಾಡುಗಳನ್ನು ಸಂಗೀತ ಕೃತಿಗಳೆಂದು ಪರಿಗಣಿಸಲಾಗುತ್ತದೆ . ಸ್ಫೂರ್ತಿ, ಸಂವೇದನೆ ಮೂಲಕ ಮನಸ್ಸಿಗೆ ಅಪ್ತವಾಗುತ್ತವೆ ಎಂದರು.
ಕೆಎಂಸಿ ಅಸ್ಪತ್ರೆಯ  ಇಲೆಕ್ಟ್ರಿಕಲ್ ಇಂಜಿನಿಯರ್  ರವೀಂದ್ರ ಮಾತನಾಡಿ, ಸಾಹಿತ್ಯಕ್ಕೆ ರಾಗವನ್ನು ಕೊಟ್ಟು ಹಾಡುಗಳನ್ನು ಹಾಡುತ್ತಾ ಮನಸ್ಸನ್ನು  ಮುದಗೊಳಿಸಲು ಸಾಧ್ಯ ಎಂದರು.
ಗಾಯಕಿ ರಶ್ಮಿಅರ್. ಪ್ರಭು  ಮಾತನಾಡಿ, ಸ್ವರಕ್ಕೆ ಅಮೃತವನ್ನು ನೀಡುವ ಸ್ವರಾಮೃತ ಪರಿಕಲ್ಪನೆ ಅದ್ಭುತವಾಗಿದೆ. ಹಾಡುಗಾರರಿಗೆ ಈ ತಂಡ ಆಶ್ರಯ ನೀಡಲಿದೆ ಎಂದರು
ಖ್ಯಾತ ಗಾಯಕಿ ವೈಷ್ಣವಿ ರವೀಂದ್ರ ಮಾತನಾಡಿ, ಹಾಡುಗಾರಿಕೆ ಕೇವಲ ಮನರಂಜನೆ ಯಾಗಿಸದೆ ,ಸ್ಪರ್ಧಾತ್ಮಕವಾಗಿ ತೊಡಗಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಉದ್ಯಮಿ ರಾಧಾಕೃಷ್ಣ ಮಣಿಪಾಲ್ ಮಾತನಾಡಿದರು.
ಶಾಶ್ವತ್ ತೆಳ್ಳಾರು, ಡಾ.ಗುರುಪ್ರಸಾದ್  ಶುಭ ಹಾರೈಸಿದರು.

ಸಭೆಯಲ್ಲಿ ಪತ್ರಕರ್ತ ಹರಿಪ್ರಸಾದ್ ನಂದಳಿಕೆ, ರಾಂ ಅಜೆಕಾರು , ಚಿತ್ತಾರ ಸೇವಾ ರೂವಾರಿ ಸುಜಿತ್ ನಂದಳಿಕೆ,  ಮಲಬಾರ್ ಗೋಲ್ಡ್ ಮಾರ್ಕೆಟಿಂಗ್ ವ್ಯವಸ್ಥಾಪಕ ರಾಘವೇಂದ್ರ ನಾಯಕ್, ಲೇಖಕಿ ಸುಮ ಕಿರಣ್ , ಲೆಕ್ಕ ಪರಿಶೋಧಕ ಸುರೇಶ್, ಗೀತಾಂಜಲಿ , ಖ್ಯಾತ ಛಾಯಾಗ್ರಾಹಕ ಶರತ್ ಕಾನಂಗಿ, ಡಾ. ಸ್ನೇಹ ಗುರುಪ್ರಸಾದ್, ಉದ್ಯಮಿ ಗಳಾದ ಹರೀಶ್ ಶೆಟ್ಟಿ, ಶಶಿಕಾಂತ್ ಪ್ರಭು ,ಜಯಾನಂದ ಕುಲಾಲ್ ,ಪ್ರಸಾದ್‌ಅಚಾರ್ಯ, ರೂಪೇಶ್ , ಸುಭಾಸ್
ಕಿರಣ್   ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು